AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
ಬೆಳಗಾವಿ ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
ಸಹದೇವ್​ ಮಾನೆ
| Edited By: ಸಾಧು ಶ್ರೀನಾಥ್​|

Updated on: Sep 12, 2023 | 9:55 AM

Share

ಬೆಳಗಾವಿ: ಜಿಲ್ಲಾ ವ್ಯಾಪ್ತಿಯಲ್ಲಿರುವ ಬರುವ 28 ಗ್ರಾಮಗಳನ್ನು ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ (Belagavi BUDA Notice) ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ ಬುಡಾದಿಂದ ನೋಟಿಸ್ ಜಾರಿಯಾಗಿದೆ. ಇದರಿಂದಾಗಿ ಹೊಸ ಬಡಾವಣೆ, ಹೊಸ ಕೈಗಾರಿಕೆಗಳಿಗಾಗಿ ರೈತರು ಭೂಮಿ (Agriculture Land) ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮದ ರೈತರಿಗೆ (Farmers) ನೋಟಿಸ್ ಜಾರಿ ಮಾಡಲಾಗಿದೆ.

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ರೈತರು ಹಾಗೂ ಬುಡಾ ನಡುವೆ ಸಂಘರ್ಷ ನಡೆಯುತ್ತಿದೆ. ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

Also read: BUDA Scam: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ; ಸರ್ಕಾರಕ್ಕೆ ಕೋಟ್ಯಂತರ ನಷ್ಟ

ದಾಖಲಾರ್ಹ ಸಂಗತಿಯೆಂದರೆ ಕೃಷಿ ಭೂಮಿಯನ್ನು ಕೃಷಿಯೇತರ ಬಳಕೆಗೆ ಅನುಮತಿ ಕಡ್ಡಾಯವಾಗಿದೆ. ಗ್ರಾಮದ 250 ಮೀಟರ್ ವಿಸ್ತೀರ್ಣ ಹೊರತುಪಡಿಸಿ ಉಳಿದ ಭೂಮಿ ಏನೇ ಮಾಡಿದರೂ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

Also read: ಭ್ರಷ್ಟರ ವಿರುದ್ದ ಕೇಸ್ ದಾಖಲಿಸುವಂತೆ ಲೋಕಾಯಕ್ತಕ್ಕೆ ಕೋರ್ಟ್ ಸೂಚನೆ, ಬೆಳಗಾವಿ ನಗರಾಭಿವೃದ್ದಿ ಅಧಿಕಾರಿಗಳಿಗೆ ಬಂಧನ ಭೀತಿ

ಇದೇ ಹಾದಿಯಲ್ಲಿ ಈಗ ಬರೋಬ್ಬರಿ 28 ಗ್ರಾಮಗಳಲ್ಲಿ ರೈತರು ಭೂಮಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ನೋಟಿಸ್ ವಾಪಸ್ ಪಡೆಯುವಂತೆ ರೈತರಿಂದ ಎಚ್ಚರಿಕೆ ಹೊರಬಿದ್ದಿದೆ. ಇಲ್ಲದಿದ್ರೆ ಬುಡಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ವರದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ