Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಗೆ ಬಂದ ಹಾವನ್ನು ಕೊರಳಲ್ಲಿ ಸುತ್ತಿಕೊಂಡು ಹೋಗಿ ಕಾಡಿಗೆ ಬಿಟ್ಟ ವೃದ್ಧ; ವಿಡಿಯೋ ವೈರಲ್!

Belagavi News: ಹಾವನ್ನು ಕೊರಳಿನಲ್ಲಿ ಸುತ್ತಿಕೊಂಡು ವೃದ್ಧನೊಬ್ಬ ಸೈಕಲ್ ಸವಾರಿ ನಡೆಸಿದ್ದಾನೆ. ಈ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ.

Viral Video: ಮನೆಗೆ ಬಂದ ಹಾವನ್ನು ಕೊರಳಲ್ಲಿ ಸುತ್ತಿಕೊಂಡು ಹೋಗಿ ಕಾಡಿಗೆ ಬಿಟ್ಟ ವೃದ್ಧ; ವಿಡಿಯೋ ವೈರಲ್!
ಕೊರಳಲ್ಲಿ ಹಾವು!
Follow us
TV9 Web
| Updated By: ganapathi bhat

Updated on:Jul 04, 2021 | 6:54 PM

ಬೆಳಗಾವಿ: ಕೆಲವೊಂದು ವಿಚಿತ್ರ ಘಟನೆಗಳು ನೋಡುಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡುತ್ತದೆ. ಸಾಮಾನ್ಯ ವಿಷಯಗಳನ್ನು ಅಸಾಮಾನ್ಯ ವಿಧಾನದಲ್ಲಿ ಅಥವಾ ಅಸಹಜ ವಿಧಾನದಲ್ಲಿ ನಡೆಸಿಕೊಂಡರೆ ಅದು ವಿಚಿತ್ರ ಎನಿಸಿಬಿಡುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿಯಲ್ಲಿ ಇಂದೊಂದು ಘಟನೆ ನಡೆದಿದೆ. ನಿಮ್ಮ ಮನೆಗೆ ಹಾವು ಬಂದರೆ ಏನು ಮಾಡಬಹುದು? ಒಂದೋ ಅದರ ಪಾಡಿಗೆ ಅದು ಹೋಗಬೇಕು. ಅಥವಾ ಅದನ್ನು ತಿಳಿದವರು ತೆಗೆದುಕೊಂಡು ಹೋಗಿ ಕಾಡಿಗೆ ಬಿಡಬೇಕು. ಆದರೆ, ಇಲ್ಲಾಗಿರುವುದೇ ಬೇರೆ.

ಹಾವನ್ನು ಕೊರಳಿನಲ್ಲಿ ಸುತ್ತಿಕೊಂಡು ವೃದ್ಧನೊಬ್ಬ ಸೈಕಲ್ ಸವಾರಿ ನಡೆಸಿದ್ದಾನೆ. ಈ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. 2 ದಿನಗಳ ಹಿಂದೆ ವೃದ್ಧನ ಮನೆಯಲ್ಲಿ ಹಾವು ಪ್ರತ್ಯಕ್ಷವಾಗಿತ್ತು. ಮನೆಗೆ ಬಂದಿದ್ದ ಹಾವನ್ನು ಹಿಡಿದ ವೃದ್ಧ ಅದನ್ನು ಕಾಡಿಗೆ ಬಿಟ್ಟು ಬಂದಿದ್ದಾನೆ.

ಹಾಗೇ ಹಾವು ಹಿಡಿದು ಕಾಡಿಗೆ ಬಿಟ್ಟು ಬಂದರೆ, ಅಂಥಾ ದೊಡ್ಡ ವಿಷಯವೇನೂ ಆಗುತ್ತಿರಲಿಲ್ಲ. ಆದರೆ, ಇಲ್ಲಾಗಿರುವುದು ವಿಚಿತ್ರ. ಹಿಡಿದ ಹಾವನ್ನು ವೃದ್ಧ ಕೊರಳಿಗೆ ಸುತ್ತಿಕೊಂಡು ಹೋಗಿ ಕಾಡಿಗೆ ಬಿಟ್ಟಿದ್ದಾನೆ. ಹಾವು ಸುತ್ತಿಕೊಂಡು ಸೈಕಲ್ ಸವಾರಿ ಮಾಡಿದ್ದಾನೆ.

ವೃದ್ಧನ ಧೈರ್ಯ ನೋಡಿ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೊರಳಲ್ಲಿ ಹಾವು ಹಾಕಿಕೊಂಡು ಊರ ತುಂಬ ಸೈಕಲ್ ಸವಾರಿ ನಡೆಸಿದ ವೃದ್ಧ ಭಾರೀ ಸುದ್ದಿಯಾಗಿದ್ದಾನೆ. ಹಾವು ಸುತ್ತಿಕೊಂಡು ಸೈಕಲ್ ಸವಾರಿ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Bihar Rain: ನೋಡನೋಡುತ್ತಿದ್ದಂತೆ ಕುಸಿದು ನದಿಗೆ ಬಿದ್ದ ಮನೆ; ಭಯಾನಕ ದೃಶ್ಯದ ವಿಡಿಯೋ ವೈರಲ್​

ಬೆಳಗಾವಿಯಲ್ಲೇ ಈ ಬಾರಿಯ ಅಧಿವೇಶನ ನಡೆಸಬೇಕು: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು?

Published On - 6:39 pm, Sun, 4 July 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?