AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್​ ಕ್ರೈಂ ಪ್ರಕರಣಗಳು: ಪ್ರತಿದಿನ 25 ರಿಂದ 30 ಕೇಸ್​ ದಾಖಲು

ಬೆಳಗಾವಿ ನಗರ ಮತ್ತು ಗ್ರಾಮೀಣದಲ್ಲಿ ಸೈಬರ್ ಎಕನಾಮಿಕ್ಸ್​​ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಗಳಿವೆ. 800 ಪ್ರಕರಣಗಳಲ್ಲಿ ಜನರ ಖಾತೆಗಳಿಂದ 2.5 ಕೋಟಿ ರೂ. ದೋಚಲಾಗಿದೆ. ಮತ್ತು ಹಣ ಕಳೆದುಕೊಂಡವರೆಲ್ಲರೂ ಉನ್ನತ ಶಿಕ್ಷಣ ಪಡೆದವರು ಎಂದು ಬೆಳಗಾವಿ ನಗರ ಸಿಇಎನ್ ಪೊಲೀಸರು ತಿಳಿಸಿದರು.

ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್​ ಕ್ರೈಂ ಪ್ರಕರಣಗಳು: ಪ್ರತಿದಿನ 25 ರಿಂದ 30 ಕೇಸ್​ ದಾಖಲು
ಸೈಬರ್​ ಕ್ರೈಂ
TV9 Web
| Edited By: |

Updated on: Oct 15, 2023 | 1:36 PM

Share

ಬೆಳಗಾವಿ ಅ.15: ನಗರದಲ್ಲಿ ಆನ್‌ಲೈನ್ ವಂಚನೆ (Cyber Crime) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಜಿಲ್ಲೆಯ ಎರಡು ಸೈಬರ್ ಪೊಲೀಸ್ (Police) ಠಾಣೆಗಳಲ್ಲಿ ಪ್ರತಿದಿನ 25 ರಿಂದ 30 ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 10 ತಿಂಗಳಲ್ಲಿ ಇಂತಹ 800ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ (Belagavi) ನಗರ ಮತ್ತು ಗ್ರಾಮೀಣದಲ್ಲಿ ಸೈಬರ್ ಎಕನಾಮಿಕ್ಸ್​​ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಗಳಿವೆ. 800 ಪ್ರಕರಣಗಳಲ್ಲಿ ಜನರ ಖಾತೆಗಳಿಂದ 2.5 ಕೋಟಿ ರೂ. ದೋಚಲಾಗಿದೆ. ಮತ್ತು ಹಣ ಕಳೆದುಕೊಂಡವರೆಲ್ಲರೂ ಉನ್ನತ ಶಿಕ್ಷಣ ಪಡೆದವರು ಎಂದು ನಗರ ಸಿಇಎನ್ ಪೊಲೀಸರು ತಿಳಿಸಿದರು.

ವಂಚಕರು OTP, OLX ಮತ್ತು ಮ್ಯಾಜಿಕ್ ಬ್ರಿಕ್ಸ್, Facebook ಅಥವಾ WhatsApp ವೀಡಿಯೊ ಕರೆ, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಸ್ಕಿಮ್ಮಿಂಗ್, ಹೂಡಿಕೆ ಮತ್ತು ಟ್ರೇಡಿಂಗ್ ಅಪ್ಲಿಕೇಶನ್‌ಗಳು, ಮ್ಯಾಟ್ರಿಮೋನಿಯಲ್ ಸೈಟ್‌ಗಳು, ಉದ್ಯೋಗ ಕೊಡುಗೆಗಳು, ಕಸ್ಟಮರ್ ಕೇರ್ ಲಿಂಕ್‌ಗಳು ಮತ್ತು ಮುಂತಾದ ವಿವಿಧ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿ ಹಣ ದೋಚುತ್ತಿದ್ದಾರೆ. ಒಂದು ವಾರದ ಹಿಂದೆ, ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರು 18 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ವಂಚಕರು ಬ್ಯಾಂಕ್​​ ಖಾತೆ ಮತ್ತು ಸಿಮ್​​ಗಳಿಗೆ ಆಧಾರ ಕಾರ್ಡ್​​ ಲಿಂಕ್​ ಮಾಡಿದ್ದು, ಈ ವಿಳಾಸ ಆಧರಿಸಿ ದೆಹಲಿ, ಹರಿಯಾಣ, ಗುರ್‌ಗಾಂವ್, ರಾಜಸ್ಥಾನ, ಮುಂಬೈ ಮತ್ತು ಪುಣೆಗೆ ಭೇಟಿ ನೀಡಿದ್ದೇವೆ ಆದರೆ ಆರೋಪಿಗಳ ಸುಳಿವು ಮಾತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಸಂಜೀವ್ ಕಾಂಬ್ಳೆ ಹೇಳಿದರು.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಕೆವೈಸಿ ಅಪ್‌ಡೇಟ್‌ಗಳಿಗಾಗಿ ಕರೆ, ಮೊಬೈಲ್ ಫೋನ್‌ಗಳ ಮೂಲಕ ಕಳುಹಿಸಲಾದ ಲಿಂಕ್‌ಗಳನ್ನು ಕ್ಲಿಕ್ ಮಾಡುವುದು, ಸಾಮಾಜಿ ಜಾಲತಾಣಗಳಲ್ಲಿ ಅಪರಿಚಿತರ ಫ್ರೆಂಡ್​​ ರಿಕ್ವೆಸ್ಟ್​​ ಸ್ವೀಕರಿಸುವುದು. ಉದ್ಯೋಗಕ್ಕಾಗಿ ಚಾಟಿಂಗ್​ ಅಪ್ಲಿಕೇಶನ್​ ಮೂಲಕ ಹಣ ಮತ್ತು ದಾಖಲೆಗಳನ್ನು ನೀಡುವುದು. ಗೂಗಲ್ ಸರ್ಚ್ ಇಂಜಿನ್‌ನಲ್ಲಿ ಕಸ್ಟಮರ್​ ಕೇರ್​ ಅನ್ನು ಹುಡುಕುವುದು ವಂಚಕರಿಗೆ ಸಹಾಯ ಮಾಡುವ ಮಾರ್ಗಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜನರು ಮೋಸ ಹೋಗಿರುವುದು ಗೊತ್ತಾದ ತಕ್ಷಣ ದೂರು ದಾಖಲಿಸಿದರೆ ಬ್ಯಾಂಕ್ ಖಾತೆಯಿಂದ ವಹಿವಾಟು ತಡೆಯಬಹುದು. ಜನರು 1930 ಸೈಬರ್ ಪೋರ್ಟಲ್ ಡಯಲ್ ಮಾಡಿ ದೂರು ಸಲ್ಲಿಸಬೇಕು ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು