AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್​ ಕ್ರೈಂ ಪ್ರಕರಣಗಳು: ಪ್ರತಿದಿನ 25 ರಿಂದ 30 ಕೇಸ್​ ದಾಖಲು

ಬೆಳಗಾವಿ ನಗರ ಮತ್ತು ಗ್ರಾಮೀಣದಲ್ಲಿ ಸೈಬರ್ ಎಕನಾಮಿಕ್ಸ್​​ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಗಳಿವೆ. 800 ಪ್ರಕರಣಗಳಲ್ಲಿ ಜನರ ಖಾತೆಗಳಿಂದ 2.5 ಕೋಟಿ ರೂ. ದೋಚಲಾಗಿದೆ. ಮತ್ತು ಹಣ ಕಳೆದುಕೊಂಡವರೆಲ್ಲರೂ ಉನ್ನತ ಶಿಕ್ಷಣ ಪಡೆದವರು ಎಂದು ಬೆಳಗಾವಿ ನಗರ ಸಿಇಎನ್ ಪೊಲೀಸರು ತಿಳಿಸಿದರು.

ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್​ ಕ್ರೈಂ ಪ್ರಕರಣಗಳು: ಪ್ರತಿದಿನ 25 ರಿಂದ 30 ಕೇಸ್​ ದಾಖಲು
ಸೈಬರ್​ ಕ್ರೈಂ
TV9 Web
| Edited By: |

Updated on: Oct 15, 2023 | 1:36 PM

Share

ಬೆಳಗಾವಿ ಅ.15: ನಗರದಲ್ಲಿ ಆನ್‌ಲೈನ್ ವಂಚನೆ (Cyber Crime) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಜಿಲ್ಲೆಯ ಎರಡು ಸೈಬರ್ ಪೊಲೀಸ್ (Police) ಠಾಣೆಗಳಲ್ಲಿ ಪ್ರತಿದಿನ 25 ರಿಂದ 30 ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 10 ತಿಂಗಳಲ್ಲಿ ಇಂತಹ 800ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ (Belagavi) ನಗರ ಮತ್ತು ಗ್ರಾಮೀಣದಲ್ಲಿ ಸೈಬರ್ ಎಕನಾಮಿಕ್ಸ್​​ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಗಳಿವೆ. 800 ಪ್ರಕರಣಗಳಲ್ಲಿ ಜನರ ಖಾತೆಗಳಿಂದ 2.5 ಕೋಟಿ ರೂ. ದೋಚಲಾಗಿದೆ. ಮತ್ತು ಹಣ ಕಳೆದುಕೊಂಡವರೆಲ್ಲರೂ ಉನ್ನತ ಶಿಕ್ಷಣ ಪಡೆದವರು ಎಂದು ನಗರ ಸಿಇಎನ್ ಪೊಲೀಸರು ತಿಳಿಸಿದರು.

ವಂಚಕರು OTP, OLX ಮತ್ತು ಮ್ಯಾಜಿಕ್ ಬ್ರಿಕ್ಸ್, Facebook ಅಥವಾ WhatsApp ವೀಡಿಯೊ ಕರೆ, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಸ್ಕಿಮ್ಮಿಂಗ್, ಹೂಡಿಕೆ ಮತ್ತು ಟ್ರೇಡಿಂಗ್ ಅಪ್ಲಿಕೇಶನ್‌ಗಳು, ಮ್ಯಾಟ್ರಿಮೋನಿಯಲ್ ಸೈಟ್‌ಗಳು, ಉದ್ಯೋಗ ಕೊಡುಗೆಗಳು, ಕಸ್ಟಮರ್ ಕೇರ್ ಲಿಂಕ್‌ಗಳು ಮತ್ತು ಮುಂತಾದ ವಿವಿಧ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿ ಹಣ ದೋಚುತ್ತಿದ್ದಾರೆ. ಒಂದು ವಾರದ ಹಿಂದೆ, ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರು 18 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ವಂಚಕರು ಬ್ಯಾಂಕ್​​ ಖಾತೆ ಮತ್ತು ಸಿಮ್​​ಗಳಿಗೆ ಆಧಾರ ಕಾರ್ಡ್​​ ಲಿಂಕ್​ ಮಾಡಿದ್ದು, ಈ ವಿಳಾಸ ಆಧರಿಸಿ ದೆಹಲಿ, ಹರಿಯಾಣ, ಗುರ್‌ಗಾಂವ್, ರಾಜಸ್ಥಾನ, ಮುಂಬೈ ಮತ್ತು ಪುಣೆಗೆ ಭೇಟಿ ನೀಡಿದ್ದೇವೆ ಆದರೆ ಆರೋಪಿಗಳ ಸುಳಿವು ಮಾತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಸಂಜೀವ್ ಕಾಂಬ್ಳೆ ಹೇಳಿದರು.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಕೆವೈಸಿ ಅಪ್‌ಡೇಟ್‌ಗಳಿಗಾಗಿ ಕರೆ, ಮೊಬೈಲ್ ಫೋನ್‌ಗಳ ಮೂಲಕ ಕಳುಹಿಸಲಾದ ಲಿಂಕ್‌ಗಳನ್ನು ಕ್ಲಿಕ್ ಮಾಡುವುದು, ಸಾಮಾಜಿ ಜಾಲತಾಣಗಳಲ್ಲಿ ಅಪರಿಚಿತರ ಫ್ರೆಂಡ್​​ ರಿಕ್ವೆಸ್ಟ್​​ ಸ್ವೀಕರಿಸುವುದು. ಉದ್ಯೋಗಕ್ಕಾಗಿ ಚಾಟಿಂಗ್​ ಅಪ್ಲಿಕೇಶನ್​ ಮೂಲಕ ಹಣ ಮತ್ತು ದಾಖಲೆಗಳನ್ನು ನೀಡುವುದು. ಗೂಗಲ್ ಸರ್ಚ್ ಇಂಜಿನ್‌ನಲ್ಲಿ ಕಸ್ಟಮರ್​ ಕೇರ್​ ಅನ್ನು ಹುಡುಕುವುದು ವಂಚಕರಿಗೆ ಸಹಾಯ ಮಾಡುವ ಮಾರ್ಗಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜನರು ಮೋಸ ಹೋಗಿರುವುದು ಗೊತ್ತಾದ ತಕ್ಷಣ ದೂರು ದಾಖಲಿಸಿದರೆ ಬ್ಯಾಂಕ್ ಖಾತೆಯಿಂದ ವಹಿವಾಟು ತಡೆಯಬಹುದು. ಜನರು 1930 ಸೈಬರ್ ಪೋರ್ಟಲ್ ಡಯಲ್ ಮಾಡಿ ದೂರು ಸಲ್ಲಿಸಬೇಕು ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!