AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಲತಾಯಿ ಧೋರಣೆ: ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ

ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಲಾಗುತ್ತಿದೆ.

ಬೆಳಗಾವಿಯಲ್ಲಿ ಮಲತಾಯಿ ಧೋರಣೆ: ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ
ಶಾಲಾ ಆವರಣದಲ್ಲಿ ಪಾಠ, ಮುಖ್ಯ ಶಿಕ್ಷಕಿಯನ್ನ ತರಾಟೆಗೆ ತೆಗೆದುಕೊಂಡ ಕರವೇ
Sahadev Mane
| Edited By: |

Updated on:Jan 01, 2024 | 5:46 PM

Share

ಬೆಳಗಾವಿ, ಜನವರಿ 01: ಗಡಿನಾಡು ಬೆಳಗಾವಿಯಲ್ಲಿ (Belagavi) ಕನ್ನಡ (Kannada) ಭಾಷೆ ಉಳಿವಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟಗಳು ನಡೆದ ಮೇಲೂ ಕೂಡ ಜಿಲ್ಲೆಯ ಕನ್ನಡ ಶಾಲೆಯ ಮಕ್ಕಳಿಗೆ ಮಲತಾಯಿ ಧೋರಣೆ ಮಾತ್ರ ನಿಂತಿಲ್ಲ. ಹೌದು ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ (Marathi) ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಲಾಗುತ್ತಿದೆ.

ಅಲ್ಲದೇ ಕನ್ನಡ ಶಾಲೆಯಲ್ಲಿ, ಮರಾಠಿ ಭಾಷೆಯಲ್ಲಿ ಮ್ಯಾಪ್​ಗಳನ್ನು ಬಿಡಿಸಲಾಗಿದೆ. ನಾಮಫಲಕಗಳನ್ನೂ ಕೂಡ ಮರಾಠಿ ಭಾಷೆಯಲ್ಲಿ ಹಾಕಲಾಗಿದೆ. ಕನ್ನಡ ಮಾಧ್ಯಮ ಮಕ್ಕಳಿಗೆ ಕುಡಿಯಲು ನೀರಿಲ್ಲ, ಸೂಕ್ತ ಮೈದಾನವಿಲ್ಲ. ಒಂದೇ ಕೊಠಡಿಯಲ್ಲಿ ಐದು ತರಗತಿಯನ್ನು ನಡೆಸಲಾಗುತ್ತಿದೆ. ಮತ್ತೊಂದು ವರ್ಗದ ಮಕ್ಕಳಿಗೆ ಕಟ್ಟೆ ಮೇಲೆ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಆದರೆ ಮರಾಠಿ ಮಾಧ್ಯಮದ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ನೀಡಿ, ಕೊಠಡಿಯೊಳಗೆ ಕೂರಿಸಿ ಪಾಠ ಮಾಡಲಾಗುತ್ತಿದೆ. ಈ ಮೂಲಕ ಶಾಲೆಯ ಆಡಳಿತ ಮಂಡಳಿ ಕನ್ನಡ, ಮರಾಠಿ ಭಾಷೆ ವಿಚಾರದಲ್ಲಿ ಮಕ್ಕಳ ನಡುವೆ ತಾರತಮ್ಯ ಉಂಟುಮಾಡುತ್ತಿದೆ.

ಇದನ್ನೂ ಓದಿ: ಹೊಸ ವರ್ಷದ​ ಸೆಲೆಬ್ರೇಷನ್​ ವೇಳೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರು

ಇದನ್ನು ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಾಲೆಗೆ ದೌಡಾಯಿಸಿ ಮುಖ್ಯ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡರು. ಕನ್ನಡ ಶಾಲಾ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕರವೇ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಇನ್ನು ಕರವೇ ಕಾರ್ಯಕರ್ತರು ಆಗಮಿಸುವ ವಿಚಾರ ತಿಳಿದು ಶಿಕ್ಷಕರು ಕನ್ನಡ ಮಾಧ್ಯಮ ಮಕ್ಕಳನ್ನು ಕೊಠಿಯೊಳಗೆ ಕೂರಿಸಿದರು. ವಿಷಯ ತಿಳಿದು ಬೆಳಗಾವಿ ಗ್ರಾಮೀಣ ಪೊಲೀಸರು ಶಾಲೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ನನ್ನ ಕ್ಷೇತ್ರದಲ್ಲಿನ ವಿಚಾರ ನನಗೆ ಗೊತ್ತಾಗದೆ, ನಿಮಗೆ ಹೇಗೆ ಗೊತ್ತಾಗಿದೆ. ನಂದಿಹಳ್ಳಿಯಲ್ಲಿನ ಶೇ 90ರಷ್ಟು ಜನ ನನಗೆ ಗೊತ್ತಿದ್ದಾರೆ. ಅವರ ಹೆಸರು ಹಿಡಿದು ನಾನು ಕರೆಯುತ್ತೇನೆ. ಒಮ್ಮೆಯೂ ಜನ ಈ ಬಗ್ಗೆ ನನಗೆ ಹೇಳಿಲ್ಲ. ನೀವು ಹೊಸ ಸುದ್ದಿ ಹೇಳುತ್ತಿದ್ದೀರಿ.. ಆ ರೀತಿ ತಾರತಮ್ಯ ಎಲ್ಲಿಯೂ ಆಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಮರಾಠಿ ಶಾಲೆಗಳಲ್ಲಿ ಮರಾಠಿ ಕಲೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಪಾಲಕರು ಕನ್ನಡ ಮಾಧ್ಯಮಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ಮಾಧ್ಯಮದವರ ಮೇಲೆ ಗರಂ ಆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Mon, 1 January 24

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ