AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ

ಬೆಳಗಾವಿಯ ಕಾಗವಾಡದಲ್ಲಿ ಆಟೋ ಚಾಲಕನೋರ್ವನನ್ನು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಜಾತ್ರೆಯ ಸಂದರ್ಭದಲ್ಲಿ ಸರತಿ ಸಾಲು ತಪ್ಪಿ ಪ್ರಯಾಣಿಕರನ್ನು ಕರೆದೊಯ್ದಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಇನ್ನೊಬ್ಬ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಸೇರಿಹಣ ದೋಚಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಕಾಗವಾಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ
ಕೊಲೆಯಾದ ಆಟೋ ಚಾಲಕ ಮತ್ತು ಆರೋಪಿಗಳುImage Credit source: Tv9 Kannada
ಸಹದೇವ್​ ಮಾನೆ
| Edited By: |

Updated on: Apr 10, 2026 | 5:28 PM

Share

ಬೆಳಗಾವಿ, ಏಪ್ರಿಲ್​​ 10: ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಶೋಕ ವಡ್ಡರ್(27) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಶಿವಾ ವಡ್ಡರ್​, ಸಾಗರ್​ ವಡ್ಡರ್​ ಮತ್ತು ವಿನೋದ್ ಎಂಬವರನ್ನು ಪೊಲೀಸರು​ ಬಂಧಿಸಿದ್ದಾರೆ. ಇನ್ನು 20 ದಿನದಲ್ಲಿ ಮದುವೆಯಾಗಬೇಕಿದ್ದ ಅಶೋಕ ಹಸೆಮಣೆ ಏರುವ ಬದಲು ಭೀಕರವಾಗಿ ಹತ್ಯೆಯಾಗಿದ್ದಾರೆ.

ಮೊನ್ನೆ ದಿನ ಊರಲ್ಲಿ ದೇವರ ಜಾತ್ರೆ ನಡೆದ ಕಾರಣ, ಭಕ್ತರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಪ್ರತಿನಿತ್ಯ ಸರತಿ ಸಾಲಲ್ಲಿ ನಿಲ್ಲುತ್ತಿದ್ದ ಆಟೋಗಳು ಅಂದು ಈ ನಿಯಮ ಉಲ್ಲಂಘಿಸಿ ಜನ ಬಂದಂತೆ ಅವರನ್ನು ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಕರೆದುಕೊಂಡು ಹೋಗೋದು, ಬರೋದು ಮಾಡಿದ್ದಾರೆ. ಅದರಂತೆ ತನ್ನ ಆಟೋ ಹಿಂದಿದ್ರೂ ಇಬ್ಬರು ಪ್ಯಾಸೆಂಜರ್ ಬಂದ ಕಾರಣ ಅವರನ್ನು ಕರೆದುಕೊಂಡು ಅಶೋಕ ಹೋಗಿದ್ದಾರೆ. ಇದನ್ನ ಗಮನಿಸಿದ್ದ ಮತ್ತೊಬ್ಬ ಆಟೋ ಚಾಲಕ ಶಿವಾ ವಡ್ಡರ್, ಅಶೋಕ ವಾಪಸ್ ಬಂದಿದ್ದೇ ತಡ  ಜಗಳ ತೆಗೆದಿದ್ದಾನೆ. ಸಾಲದ್ದಕ್ಕೆ ಮತ್ತಿಬ್ಬರು ಸ್ನೇಹಿತರು ಸೇರಿಕೊಂಡು ಅಶೋಕ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಬಳಿಕ ಸಾಯಿಸಿ ಆತನ ಬಳಿ ಇದ್ದ ಹಣ ಕಿತ್ತುಕೊಂಡು ಆಟೋದ ಹಿಂಬದಿ ಸೀಟ್​​ನಲ್ಲಿ ಆತನನ್ನ ಮಲಗಿಸಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ; ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಇನ್ನು ಅಶೋಕನ ಮೇಲೆ ಹಲ್ಲೆ ಮಾಡೋದನ್ನ ನೋಡಿರುವ ಬೇರೆ ಆಟೋ ಚಾಲಕರು ಅವರ ಸಹೋದರನಿಗೆ ವಿಚಾರವನ್ನ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕುಟುಂಬಸ್ಥರು ಅಶೋಕನನ್ನ ಅದೇ ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಲವಾದ ಏಟಿನಿಂದ ಅದಾಗಲೇ ಅಶೋಕ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಕಾಗವಾಡ ಠಾಣೆ ಪೊಲೀಸರಿಗೆ ಕುಟುಂಬಸ್ಥರು ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ತಲೆ ಮರೆಸಿಕೊಂಡಿದ್ದ ಶಿವಾ ವಡ್ಡರ್, ಸಾಗರ್ ವಡ್ಡರ್, ವಿನೋದ್ ವಡ್ಡರ್ ಮೂವರನ್ನ ಬಂಧಿಸಿ ಜೈಲಿಗಟ್ಟಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ