AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ; ಸದಲಗಾ ಪೊಲೀಸ್ ಠಾಣೆ ಮುಂದೆ ನೂರಾರು ಜನರಿಂದ ಧರಣಿ

ಸಚಿವೆ ಶಶಿಕಲಾ ಜೊಲ್ಲೆ ಒತ್ತಡಕ್ಕೆ ಮಣಿದು ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಇಂದು (ಜನವರಿ 9) ಬೆಳಗ್ಗೆ ಐದು ಗಂಟೆಯಿಂದ ಪೊಲೀಸ್​ ಠಾಣೆ ಮುಂದೆ ನೂರಕ್ಕೂ ಹೆಚ್ಚು ಜನರು ಧರಣಿ ನಡೆಸುತ್ತಿದ್ದಾರೆ.

ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ; ಸದಲಗಾ ಪೊಲೀಸ್ ಠಾಣೆ ಮುಂದೆ ನೂರಾರು ಜನರಿಂದ ಧರಣಿ
ಸದಲಗಾ ಠಾಣೆ ಮುಂಭಾಗದಲ್ಲಿ ಧರಣಿ
TV9 Web
| Edited By: |

Updated on:Jan 09, 2022 | 11:53 AM

Share

ಬೆಳಗಾವಿ: ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರರ ಗೆಲುವು ವಿಚಾರಕ್ಕೆ ಸಂಬಂಧಪಟ್ಟಂತೆ ಸೇಡಿನ ರಾಜಕಾರಣ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಪರ ಹಣ ಹಂಚಿರುವುದಾಗಿ ಶಶಿಕಲಾ ಜೊಲ್ಲೆ (shashikala jolle) ಆಪ್ತರು ದೂರು ದಾಖಲಿಸಿದ್ದು, ಈ ಪ್ರಕರಣಕ್ಕೆ ಸಂಬಂಧ ಇಲ್ಲದೇ ಇರುವವರನ್ನು ಪೊಲೀಸರು (Karnataka police) ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಬೋರಗಾಂವ್ ಪಟ್ಟಣದ ಜನರು ಸದಲಗಾ ಠಾಣೆ ಮುಂಭಾಗದಲ್ಲಿ ಪೊಲೀಸರ ವಿರುದ್ಧ ಧರಣಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಬೆಂಬಲ ನೀಡದವರ ಮೇಲೆ ಸೇಡಿನ ರಾಜಕಾರಣ ನಡೆಸಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಹಣ ಹಂಚಿರುವುದಾಗಿ ದೂರು ನೀಡಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆ ಒತ್ತಡಕ್ಕೆ ಮಣಿದು ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಇಂದು (ಜನವರಿ 9) ಬೆಳಗ್ಗೆ ಐದು ಗಂಟೆಯಿಂದ ಪೊಲೀಸ್​ ಠಾಣೆ ಮುಂದೆ ನೂರಕ್ಕೂ ಹೆಚ್ಚು ಜನರು ಧರಣಿ ನಡೆಸುತ್ತಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಆಪ್ತ ಉತ್ತಮ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾತ್ರೋರಾತ್ರಿ ಐದು ಜನರನ್ನ ಬಂಧಿಸಿ ಕರೆದುಕೊಂಡು ಬಂದ ಪೊಲೀಸರ ವಿರುದ್ಧ ಜನರು ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಸ್ಥಳಕ್ಕೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಭೇಟಿ ನೀಡಿದ್ದು, ಕಾನೂನು ಹೋರಾಟ ಮಾಡಿ ಎಂದು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದರೂ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬಾರದೆ ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Assembly Elections 2022: ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಪಂಚರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಹೆಚ್ಚಳ; ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಓರ್ವ ಅಭ್ಯರ್ಥಿ ಎಷ್ಟು ಖರ್ಚು ಮಾಡಬಹುದು?

Published On - 11:36 am, Sun, 9 January 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್