AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Phone In Program: ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ, ಒಂದು ಕರೆ ಮೂಲಕ ಸಮಸ್ಯೆ ಪರಿಹಾರ

ಶನಿವಾರ ನಡೆಯಲಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ, ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದೆ.

Phone In Program: ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ, ಒಂದು ಕರೆ ಮೂಲಕ ಸಮಸ್ಯೆ ಪರಿಹಾರ
ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ
Sahadev Mane
| Edited By: |

Updated on: Jun 09, 2023 | 3:34 PM

Share

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ(Dr sanjeeva patil) ನೇತೃತ್ವದಲ್ಲಿ ನಡೆಯುತ್ತಿರುವ ಫೋನ್ ಇನ್ ಕಾರ್ಯಕ್ರಮ(Phone In Program) ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಜನಸ್ನೇಹಿ ಆಡಳಿತಕ್ಕೆ ಹೆಸರುವಾಸಿಯಾಗಿದೆ. ನಾಳೆ ನಡೆಯಲಿರುಗ 13ನೇ ಫೋನ್ ಇನ್ ಕಾರ್ಯಕ್ರಮ ಇತಿಹಾಸ ಬರೆಯಲಿದೆ. ಕರೆ ಸ್ವೀಕರಿಸಿ ಆ ಕ್ಷಣವೇ ಸಮಸ್ಯೆ ಬಗೆಹರಿಸಲಾಗುತ್ತೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದೆ. ಅಲ್ಲದೆ ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ ಮಾಡುತ್ತಿರುವ ಈ ಫೋನ್ ಇನ್ ಕಾರ್ಯಕ್ರಮದಿಂದ ಜಿಲ್ಲೆಯ ಸಾಕಷ್ಟು ಸಮಸ್ಯೆ ಒಂದು‌ ಫೋನ್ ಕರೆಯಿಂದ ಬಗೆ ಹರಿದಿದೆ. ನಾಳೆ ನಡೆಯಲಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ನಡೆಯುತ್ತಿರುವುದು ಇತಿಹಾಸ ಸೃಷ್ಟಿಸಲಿದೆ.

ಬೆಳಗಾವಿಯ ಜಿಲ್ಲೆಯಲ್ಲಿ ಅಕ್ರಮ ಸರಾಯಿ, ಮರಳು ಸಾಗಾಟ, ಶಾಲಾ ಆವರಣದಲ್ಲಿ ತಂಬಾಕು, ಮಟ್ಕಾ, ಕೌಂಟುಂಬಿಕ ಸಮಸ್ಯೆ, ಕಳ್ಳತನ ಪ್ರಕರಣ, ಸಂಚಾರ ಸಮಸ್ಯೆಯ ಕುರಿತು ಸಾರ್ವಜನಿಕರು ಎಸ್ಪಿ ಅವರಿಗೆ ಕರೆ ಮಾಡಿ ದೂರಿದ ಹಿನ್ನೆಲೆಯಲ್ಲಿ ತತ್ವರಿತ ರೀತಿಯಲ್ಲಿ ಸ್ಪಂದಿಸಿ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸೈಬರಾಬಾದ್​ನಲ್ಲಿ ಹ್ಯಾಕರ್‌ಗಳ ಹುಚ್ಚುತನ: ಪೊಲೀಸ್ ಠಾಣೆಯ ಫೇಸ್‌ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋಗಳು ತುಂಬಿತುಳುಕುತ್ತಿವೆ!

ನಾಳೆ ಶನಿವಾರ ನಡೆಯಲಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ, ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 0831 2405226ಗೆ ಸಂಪರ್ಕಿಸಿ ಕರೆ ಮಾಡಬಹುದು.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ