AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Phone In Program: ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ, ಒಂದು ಕರೆ ಮೂಲಕ ಸಮಸ್ಯೆ ಪರಿಹಾರ

ಶನಿವಾರ ನಡೆಯಲಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ, ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದೆ.

Phone In Program: ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ, ಒಂದು ಕರೆ ಮೂಲಕ ಸಮಸ್ಯೆ ಪರಿಹಾರ
ಬೆಳಗಾವಿಯಲ್ಲಿ 13ನೇ ಫೋನ್ ಇನ್ ಕಾರ್ಯಕ್ರಮ
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on: Jun 09, 2023 | 3:34 PM

Share

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ(Dr sanjeeva patil) ನೇತೃತ್ವದಲ್ಲಿ ನಡೆಯುತ್ತಿರುವ ಫೋನ್ ಇನ್ ಕಾರ್ಯಕ್ರಮ(Phone In Program) ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಜನಸ್ನೇಹಿ ಆಡಳಿತಕ್ಕೆ ಹೆಸರುವಾಸಿಯಾಗಿದೆ. ನಾಳೆ ನಡೆಯಲಿರುಗ 13ನೇ ಫೋನ್ ಇನ್ ಕಾರ್ಯಕ್ರಮ ಇತಿಹಾಸ ಬರೆಯಲಿದೆ. ಕರೆ ಸ್ವೀಕರಿಸಿ ಆ ಕ್ಷಣವೇ ಸಮಸ್ಯೆ ಬಗೆಹರಿಸಲಾಗುತ್ತೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದೆ. ಅಲ್ಲದೆ ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ ಮಾಡುತ್ತಿರುವ ಈ ಫೋನ್ ಇನ್ ಕಾರ್ಯಕ್ರಮದಿಂದ ಜಿಲ್ಲೆಯ ಸಾಕಷ್ಟು ಸಮಸ್ಯೆ ಒಂದು‌ ಫೋನ್ ಕರೆಯಿಂದ ಬಗೆ ಹರಿದಿದೆ. ನಾಳೆ ನಡೆಯಲಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ನಡೆಯುತ್ತಿರುವುದು ಇತಿಹಾಸ ಸೃಷ್ಟಿಸಲಿದೆ.

ಬೆಳಗಾವಿಯ ಜಿಲ್ಲೆಯಲ್ಲಿ ಅಕ್ರಮ ಸರಾಯಿ, ಮರಳು ಸಾಗಾಟ, ಶಾಲಾ ಆವರಣದಲ್ಲಿ ತಂಬಾಕು, ಮಟ್ಕಾ, ಕೌಂಟುಂಬಿಕ ಸಮಸ್ಯೆ, ಕಳ್ಳತನ ಪ್ರಕರಣ, ಸಂಚಾರ ಸಮಸ್ಯೆಯ ಕುರಿತು ಸಾರ್ವಜನಿಕರು ಎಸ್ಪಿ ಅವರಿಗೆ ಕರೆ ಮಾಡಿ ದೂರಿದ ಹಿನ್ನೆಲೆಯಲ್ಲಿ ತತ್ವರಿತ ರೀತಿಯಲ್ಲಿ ಸ್ಪಂದಿಸಿ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸೈಬರಾಬಾದ್​ನಲ್ಲಿ ಹ್ಯಾಕರ್‌ಗಳ ಹುಚ್ಚುತನ: ಪೊಲೀಸ್ ಠಾಣೆಯ ಫೇಸ್‌ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋಗಳು ತುಂಬಿತುಳುಕುತ್ತಿವೆ!

ನಾಳೆ ಶನಿವಾರ ನಡೆಯಲಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ, ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 0831 2405226ಗೆ ಸಂಪರ್ಕಿಸಿ ಕರೆ ಮಾಡಬಹುದು.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ