AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ! ಮೂವರ ಅರೆಸ್ಟ್

ಮೂವರು ಪುರುಷರನ್ನು ವಶಕ್ಕೆ ಪಡೆದ ಪೊಲೀಸರು, 5 ಜನ ಮಹಿಳೆಯರನ್ನ ರಕ್ಷಣೆ ಮಾಡಿದ್ದಾರೆ. ಐವರು ಮಹಿಳೆಯರ ಆರೋಗ್ಯ ತಪಾಸಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ! ಮೂವರ ಅರೆಸ್ಟ್
ಗೋಲ್ಡನ್ ಸ್ಟಾರ್ ಹೊಟೇಲ್
TV9 Web
| Edited By: |

Updated on: Feb 27, 2022 | 11:24 AM

Share

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ಪಟ್ಟಣ ಹೊರವಲಯದ ಗೋಲ್ಡನ್ ಸ್ಟಾರ್ ಹೊಟೇಲ್ನಲ್ಲಿ ವೇಶ್ಯಾವಾಟಿಕೆ (Prostitution) ನಡೆಯುತ್ತಿದ್ದು, ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮೂವರು ಅರೆಸ್ಟ್ ಆಗಿದ್ದಾರೆ. ತಡರಾತ್ರಿ ನಿಪ್ಪಾಣಿ ನಗರ ಪೊಲೀಸರು (Police) ದಾಳಿ ನಡೆಸಿ ಎಂಟು ಜನರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೂವರು ಪುರುಷರನ್ನು ವಶಕ್ಕೆ ಪಡೆದ ಪೊಲೀಸರು, 5 ಜನ ಮಹಿಳೆಯರನ್ನ ರಕ್ಷಣೆ ಮಾಡಿದ್ದಾರೆ. ಐವರು ಮಹಿಳೆಯರ ಆರೋಗ್ಯ ತಪಾಸಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಸಂಕೇಶ್ವರ ನಿವಾಸಿ ಸಂಜಯ ಭೈರಪ್ಪ ಮಾಳಿ (35), ಹುಕ್ಕೇರಿ ನಿವಾಸಿ ಅರುಣ್ ಜೈಪಾಲ ಶೇಕಣ್ಣವರ್ (34), ಪಿಂಪಲ್ ನಿವಾಸಿ ಪರಶುರಾಮ ಖಂಡೋಬಾ ಚವ್ಹಾಣ (35) ಬಂಧಿತ ಆರೋಪಿಗಳು. ನಿಪ್ಪಾಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಗಳು

ಈ ಹಿಂದೆ ಅಂದರೆ ಫೆಬ್ರವರಿ 9ಕ್ಕೆ ಮಂಗಳೂರಿನಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಮಂಗಳೂರು ಸಿಸಿಬಿ ಪೊಲೀಸರು ಈ ಪ್ರಕರಣದ ಬೆನ್ನು ಬಿದ್ದಿದ್ದರು. ನಗರದ ನಂದಿಗುಡ್ಢ ರಿಯಾನ್ ರೆಸಿಡೆನ್ಸಿಯ ಪೆಂಟ್ ಹೌಸ್ ನಲ್ಲಿ ಹೈಟೆಕ್ ವೇಶ್ಯೆವಾಟಿಕೆ ಪ್ರಕರಣ ನಡೆಯುತ್ತಿರುವುದು ತಿಳಿದುಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 6 ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಒಟ್ಟು 10 ಜನರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ಮಾಡಲಾಗಿದೆ.

ವಿಡಿಯೋ ಇಟ್ಟುಕೊಂಡು ವಿದ್ಯಾರ್ಥಿಗೆ ಆರೋಪಿಗಳು ಬ್ಲಾಕ್ ಮೇಲ್ ಮಾಡುತ್ತಿದ್ದರು. ಪಿಯುಸಿ ವಿದ್ಯಾರ್ಥಿಯನ್ನು 2- 3 ತಿಂಗಳುಗಳಿಂದ ವೇಶ್ಯಾವಾಟಿಕೆ ಬಳಸಿಕೊಂಡಿದ್ದರು ಎಂದು ತಿಳಿದುಬಂದಿತ್ತು. ಗ್ರಾಹಕರ ರೀತಿಯಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ ಮೂವರ ಬಂಧನ ಮಾಡಲಾಗಿತ್ತು.

ಇದನ್ನೂ ಓದಿ

ಆಪರೇಶನ್​ ಗಂಗಾ; ಉಕ್ರೇನ್​​ನಿಂದ ಮಧ್ಯರಾತ್ರಿ ಆಗಮಿಸಿದ 250 ಭಾರತೀಯರು; ಮುಂಜಾನೆಯೇ ಬುಡಾಪೆಸ್ಟ್​​ನಿಂದ ಹೊರಟಿದೆ ಇನ್ನೊಂದು ಫ್ಲೈಟ್​

‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು