AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ, ಶೂಟರ್ಸ್​ಗೆ ಬುಲಾವ್, ವಿಶೇಷ ಡ್ರೋಣ್ ಬಳಕೆ

ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ.

Belagavi News: ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ, ಶೂಟರ್ಸ್​ಗೆ ಬುಲಾವ್, ವಿಶೇಷ ಡ್ರೋಣ್ ಬಳಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 23, 2022 | 11:01 AM

Share

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ (Leopard Catch) ಇಂದೂ (ಆಗಸ್ಟ್​ 23) ಸಹ ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ. ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲೆಂದು ಸಂಜೆ ವೇಳೆಗೆ ಸಕ್ರೆಬೈಲ್‌‌ನಿಂದ ಆನೆಗಳು ಬರುವ ಸಾಧ್ಯತೆಯಿದೆ. 250 ಎಕರೆ ಪ್ರದೇಶ ವಿಸ್ತೀರ್ಣದ ಗಾಲ್ಫ್ ಮೈದಾನದಿಂದ ಚಿರತೆ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ. ನಿನ್ನೆ ಎರಡು ಬಾರಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ (ಕೂಂಬಿಂಗ್) ನಡೆಸಿದ್ದರು. ಆನೆಗಳು ಬಂದ ನಂತರ ಚಿರತೆಗಾಗಿ ಆನೆಗಳ ನೆರವಿನೊಂದಿಗೆ ಮತ್ತೊಮ್ಮೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ.

ಗಾಲ್ಫ್ ಮೈದಾನಕ್ಕೆ ಬಂದಿರುವ ಹಂದಿ ಹಿಡಿಯುವ ಯುವಕರು ತಮ್ಮೊಂದು ಸುಮಾರು 20 ನಾಯಿಗಳನ್ನು ಕರೆತಂದಿದ್ದಾರೆ. ನಾಯಿಗಳ ನೆರವಿನೊಂದಿಗೆ ಅವರೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆಯನ್ನು ಮುಂದುವರಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.

ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್​ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲಿಯೇ ಬಿಡುಬಿಟ್ಟಿದ್ದರು. ಕಾರ್ಯಾಚರಣೆ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಪತ್ತೆಗಾಗಿ ಬೆಂಗಳೂರಿನಿಂದ ವಿಶೇಷ ತಂತ್ರಜ್ಞಾನದ ಡ್ರೋನ್ ತರಲಾಗಿದೆ. ಗಾಲ್ಫ್ ಮೈದಾನದ ಸಿಬ್ಬಂದಿ ಗಸ್ತು ತಿರುಗುತ್ತಿಇದ್ದಅರೆ. ಇಂದು ಚಿರತೆ ಹಿಡಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಆಲ್ಗೊರಿದಮ್ ಡ್ರೋಣ್ ಬಳಕೆ

ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆಯ ಶೋಧ ಕಾರ್ಯಕ್ಕಾಗಿ ಅಲ್ಗೋರಿದಮ್ ತಂತ್ರಜ್ಞಾನದ ಡ್ರೋಣ್ ಬಳಸಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ವಿಶೇಷ ತಂಡವು ಕಾರ್ಯಾಚರಣೆಗೆ ಮುಂದಾಗಿದೆ. ಈ ಡ್ರೋಣ್ ಗಾಲ್ಫ್ ಮೈದಾನದ 250 ಎಕರೆ ಪ್ರದೇಶವನ್ನು ಇಡಿಯಾಗಿ ಸ್ಕ್ಯಾನ್ ಮಾಡಲಿದೆ. ಪ್ರಾಣಿಗಳ ಎಲುಬುಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಈ ಡ್ರೋಣ್​ಗೆ ಇದೆ. ಎಲುಬು ಪತ್ತೆಯಾದ ನಂತರ ಅದರ ಆಧಾರದ ಮೇಲೆ ಚಿರತೆ ಸೆರೆಗೆ ಕಾರ್ಯಾಚರಣೆ ಜರವೀಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯಲಿದೆ.

Published On - 11:01 am, Tue, 23 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?