ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್

ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು.

ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
Edited By: sandhya thejappa

Updated on: Jan 30, 2022 | 8:39 AM

ಬೆಳಗಾವಿ: ನಗರದಲ್ಲಿ ಉದ್ಯಮಿಯನ್ನು ಅಪಹರಣ (Kidnap) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, 8 ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಪ್ಟೋ ಕರೆನ್ಸಿ (Cryptocurrency) ವ್ಯವಹಾರ ನಡೆಸುತ್ತಿದ್ದ ರವಿಕಿರಣ್ ಎಂಬುವವರನ್ನು ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಹುಬ್ಬಳ್ಳಿಯಿಂದ ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಿಡ್ನ್ಯಾಪ್ ಆಗಿತ್ತು. ಕೆಎಲ್ಇ ಆಸ್ಪತ್ರೆ ಬಳಿ ಕಾರು ತಡೆದು ಅಪಹರಣ ಮಾಡಿದ್ದರು. ಜ.14ಕ್ಕೆ ಅಪಹರಿಸಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ ನಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ನೇರವಾಗಿ ಖಾನಾಪುರ ಬಳಿ ಕೋಳಿ ಫಾರ್ಮ್​ಗೆ ಕರೆದೊಯ್ದಿದ್ದಾರೆ.

ಬಂಧಿತರು ರವಿಕಿರಣ್ನಣ್​ನ ಕುರ್ಚಿ ಮೇಲೆ ಕೂರಿಸಿ ಕೈ, ಕಾಲು ಕಟ್ಟಿ ಹೊಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಬಳಿಕ ಆತನ ಬಳಿ ಇದ್ದ 55 ಸಾವಿರ ನಗದು, ಆ್ಯಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದರು. ಬಳಿಕ ರವಿಕಿರಣ್ ಮೊಬೈಲ್​ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಮಾರನೇ ದಿನ ಬೆಳಗ್ಗೆ ರವಿಕಿರಣ್ ತಪ್ಪಿಸಿಕೊಂಡು ಬಂದಿದ್ದರು. ಅಪಹರಣಕಾರರಿಂದ ತಪ್ಪಿಸಿಕೊಂಡು ದಾಂಡೇಲಿಗೆ ತೆರಳಿದ್ದರು. ಮೂರು ದಿನಗಳ ಬಳಿಕ ಅಂದರೆ ಜ.18ರಂದು ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಬೆಳಗಾವಿಯಲ್ಲಿ ಇಬ್ಬರು, ಖಾನಾಪುರದಲ್ಲಿ ಓರ್ವ, ಗೋವಾದಲ್ಲಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ.

ಇದನ್ನೂ ಓದಿ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ಕೋವಿಡ್​ ಟೆಸ್ಟಿಂಗ್ ಲ್ಯಾಬ್ ಸಿಬ್ಬಂದಿ ಪಾನಮತ್ತರಾಗಿ ಕೆಲಸ ಮಾಡುತ್ತರೆ ಎಂದರು ಪ್ರಯಾಣಿಕರು!

Published On - 8:38 am, Sun, 30 January 22

Web contact

TV9 Kannada

Read More
Follow Us