AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್
ಬಂಧಿತ ಆರೋಪಿಗಳು
TV9 Web
| Edited By: |

Updated on:Dec 21, 2021 | 9:37 AM

Share

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕಕ್ಕೆ ಸಂಬಂಧಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಎಂಬುವವರು ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳು ಮೊನ್ನೆ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ಮೆರೆದಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ.

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಎಮ್ಇಎಸ್ ಸಂಘಟನೆ ನಿಷೇಧಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಎಮ್ಇಎಸ್ ಮತ್ತು ಶಿವಸೇನೆ ಸಂಘಟನೆ ವಿರುದ್ಧ ಕನ್ನಡಿಗರ ಕೂಗು ಮುಗಿಲು ಮುಟ್ಟಿದೆ. ಈ ನಡುವೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿ ಗ್ರಾಮದಲ್ಲಿ ಆರೋಪಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು.

ಬೆಳಗಾವಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಆರೋಪಿಗಳು ಬೆಂಕಿ ಹಚ್ಚಿದ್ದರು. ರಾತ್ರಿ ಬೆಂಕಿ ಹಚ್ಚಿ, ಧ್ವಜಕಟ್ಟೆಯ ಮೇಲಿನ ಜಗಜ್ಯೋತಿ ಬಸವೇಶ್ವರ ಚಿತ್ರಕ್ಕೆ ಕಪ್ಪು ಮಸಿ ಬಳಿದು ಪುಂಡಾಟ ಮೆರೆದಿದ್ದರು. ನಿನ್ನೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ರಾರಾಜಿಸುತ್ತಿದೆ ಕನ್ನಡದ ಬಾವುಟ ಕಿಡಿಗೇಡಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು. ಆದರೆ ಗ್ರಾಮಸ್ಥರು, ಪೊಲೀಸರು ಹೊಸ ಬಾವುಟವನ್ನು ಹಾರಿಸಿದ್ದಾರೆ. ನಂದಗಡ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಇದನ್ನೂ ಓದಿ

ಅನಾರೋಗ್ಯದಿಂದ ಬಳಲುತ್ತಿರುವ ಹುಡುಗಿಗೆ ವಿಡಿಯೋ ಕಾಲ್ ಮೂಲಕ ಧೈರ್ಯ ತುಂಬಿದರು ಮೆಗಾಸ್ಟಾರ್ ರಜಿನೀಕಾಂತ್

ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಯಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಹೊಸ ಅಭಿಯಾನ

Published On - 9:32 am, Tue, 21 December 21

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!