AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ

ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:39 PM

Share

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಪೂರಕ ಅಂದಾಜು ಮಂಡನೆ ಮಾಡಲಾಗಿದೆ. 3574.76 ಕೋಟಿ ರೂಪಾಯಿ ಗಾತ್ರದ ಪೂರಕ ಅಂದಾಜು ಮಂಡಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಮಹದಾಯಿ ಕ್ಲೇಮ್‌ ಕಮಿಷನ್‌ ಕಚೇರಿಗೆ 33 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಕ್ಲೇಮ್‌ ಕಮಿಷನ್‌ ಕಚೇರಿಗೆ 50 ಲಕ್ಷ ರೂಪಾಯಿ, ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5.55 ಕೋಟಿ ರೂಪಾಯಿ, ವಕ್ಪ್‌ ಆಸ್ತಿಗಳ ವಿಶೇಷ ಸರ್ವೆ ಮಾಡಲು 50 ಲಕ್ಷ ರೂಪಾಯಿ, ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂಪಾಯಿ, ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3.73 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದ ಪ್ರವಾಸ, ದಾವೋಸ್‌ ಪ್ರವಾಸದ ವೆಚ್ಚದ ಮೊತ್ತ 4 ಕೋಟಿ ರೂಪಾಯಿ, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂಪಾಯಿ, ಮಿನಿ ಒಲಿಂಪಿಕ್‌ ಕ್ರೀಡಾಕೂಟ ನಡೆಸಲು 2.5 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆ ಬಿಲ್‌ ಪಾವತಿಗೆ 200 ಕೋಟಿ ರೂಪಾಯಿ, ಕೊವಿಡ್‌ ವೇಳೆ ವಿದ್ಯುತ್‌ ಬಿಲ್‌ ಮನ್ನಾ ಮಾಡಿದ್ದಕ್ಕೆ 68 ಕೋಟಿ ರೂಪಾಯಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋಟಿ ರೂಪಾಯಿ, ಸಭಾಪತಿ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್