AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ

ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:39 PM

Share

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಪೂರಕ ಅಂದಾಜು ಮಂಡನೆ ಮಾಡಲಾಗಿದೆ. 3574.76 ಕೋಟಿ ರೂಪಾಯಿ ಗಾತ್ರದ ಪೂರಕ ಅಂದಾಜು ಮಂಡಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಮಹದಾಯಿ ಕ್ಲೇಮ್‌ ಕಮಿಷನ್‌ ಕಚೇರಿಗೆ 33 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಕ್ಲೇಮ್‌ ಕಮಿಷನ್‌ ಕಚೇರಿಗೆ 50 ಲಕ್ಷ ರೂಪಾಯಿ, ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5.55 ಕೋಟಿ ರೂಪಾಯಿ, ವಕ್ಪ್‌ ಆಸ್ತಿಗಳ ವಿಶೇಷ ಸರ್ವೆ ಮಾಡಲು 50 ಲಕ್ಷ ರೂಪಾಯಿ, ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂಪಾಯಿ, ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3.73 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದ ಪ್ರವಾಸ, ದಾವೋಸ್‌ ಪ್ರವಾಸದ ವೆಚ್ಚದ ಮೊತ್ತ 4 ಕೋಟಿ ರೂಪಾಯಿ, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂಪಾಯಿ, ಮಿನಿ ಒಲಿಂಪಿಕ್‌ ಕ್ರೀಡಾಕೂಟ ನಡೆಸಲು 2.5 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆ ಬಿಲ್‌ ಪಾವತಿಗೆ 200 ಕೋಟಿ ರೂಪಾಯಿ, ಕೊವಿಡ್‌ ವೇಳೆ ವಿದ್ಯುತ್‌ ಬಿಲ್‌ ಮನ್ನಾ ಮಾಡಿದ್ದಕ್ಕೆ 68 ಕೋಟಿ ರೂಪಾಯಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋಟಿ ರೂಪಾಯಿ, ಸಭಾಪತಿ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ