AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಕರ್ನಾಟಕ ಸೇರಿದಂತೆ ದೇಶದ ವಿವಿಗಳಿಗೆ ಕೇಂದ್ರದಿಂದ 3600 ಕೋಟಿ ರೂ. ಅನುದಾನ ಬಿಡುಗಡೆ: ಪ್ರಲ್ಹಾದ್ ಜೋಶಿ

PM Usha Yojana: ಪ್ರಧಾನಮಂತ್ರಿ ಉಷಾ ಯೋಜನೆಯಡಿ ಕರ್ನಾಟಕವೂ ಸೇರಿದಂತೆ ದೇಶದ ಅನೇಕ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೆಳಗಾವಿಯಲ್ಲಿ ತಿಳಿಸಿದರು. ಕರ್ನಾಟಕದ ಯಾವ ವಿಶ್ವವಿದ್ಯಾಲಯಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿಯನ್ನೂ ಅವರು ನೀಡಿದರು.

Pralhad Joshi: ಕರ್ನಾಟಕ ಸೇರಿದಂತೆ ದೇಶದ ವಿವಿಗಳಿಗೆ ಕೇಂದ್ರದಿಂದ 3600 ಕೋಟಿ ರೂ. ಅನುದಾನ ಬಿಡುಗಡೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Feb 20, 2024 | 2:12 PM

Share

ಬೆಳಗಾವಿ, ಫೆಬ್ರವರಿ 20: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದರು. ಬೆಳಗಾವಿಯಲ್ಲಿ (Belagavi) ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಧಾನಮಂತ್ರಿ ಉಷಾ ಯೋಜನೆ’ಯಡಿ (PM Usha Yojana) 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದ ಯಾವ ವಿವಿಗೆ ಎಷ್ಟು ಅನುದಾನ?

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಜೋಶಿ ತಿಳಿಸಿದರು. ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ ಅವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಜೋಶಿ ಹೇಳಿದರು.

ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.

ಜಮ್ಮು ಅಭಿವೃದ್ಧಿಗೆ ಐತಿಹಾಸಿಕ ಕ್ರಮ: ಜೋಶಿ

ಜಮ್ಮು- ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗದು ಸಂಪೂರ್ಣ ಬದಲಾಗಿದೆ. ಅಭಿವೃದ್ಧಿ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ ಅವರು ಇಂದು ಅಲ್ಲಿಂದಲೇ ಚಾಲನೆ ನೀಡಿದ್ದಾರೆ. ನಾನು ಮತ್ತು ಸಂಸದೆ ಮಂಗಳಾ ಅಂಗಡಿ ಅವರು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ ಎಂದು ಸಚಿವ ಜೋಶಿ ತಿಳಿಸಿದರು.

ಇದನ್ನೂ ಓದಿ: ಜಮ್ಮುವಿನಲ್ಲಿ 32,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿನಲ್ಲಿ 32,000 ಕೋಟಿ ರೂ.ಗಳ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಇರದಲ್ಲಿ ಸೇರಿವೆ. ಈ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದ ನಂತರ ಜೋಶಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:09 pm, Tue, 20 February 24

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್