AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ; ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ; ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಬೆಳಗಾವಿ ಸುವರ್ಣಸೌಧ
TV9 Web
| Edited By: |

Updated on: Dec 17, 2022 | 9:05 AM

Share

ಬೆಳಗಾವಿ: ಡಿಸೆಂಬರ್ 19ರಿಂದ ಡಿ.30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ 10ನೇ ಚಳಿಗಾಲದ ಅಧಿವೇಶನಕ್ಕೆ(Belagavi Winter Session) ಸಿದ್ಧತೆಗಳು ಶುರುವಾಗಿವೆ. ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧ ಹೇರಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಧಿವೇಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇಡೀ ಸರ್ಕಾರವೇ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಹಿನ್ನೆಲೆ ಅಧಿಕಾರಿಗಳು ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡುತ್ತಿದ್ದಾರೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸುತ್ತಿರುವ ಹಿನ್ನೆಲೆ ನಗರದ ಬಹುತೇಕ ಲಾಡ್ಜ್​ಗಳು ಸಂಪೂರ್ಣ ಭರ್ತಿಯಾಗಿವೆ.

ಇದನ್ನೂ ಓದಿ: ಇದು ನೆಹರೂ ಭಾರತವಲ್ಲ: ರಾಹುಲ್ ಗಾಂಧಿಯ ಚೀನಾ ಬೆದರಿಕೆ ಕುರಿತ ಹೇಳಿಕೆಗೆ ಬಿಜೆಪಿ ತಿರುಗೇಟು

ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ

ಈ ಬಾರಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ ತಟ್ಟುವ ಸಾಧ್ಯತೆ ಇದೆ. ಹಲವು ಸಮುದಾಯಗಳಿಂದ ಮೀಸಲಾತಿ ಹೋರಾಟಕ್ಕೆ ಪ್ಲ್ಯಾನ್ ನಡೆದಿದೆ. ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕೆಲ ಸಮೀತಿಗಳು ಪ್ಲಾನ್ ಮಾಡಿಕೊಂಡಿವೆ. ಅಧಿವೇಶನ ಸಮಯದಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ 62 ಸಂಘಟನೆಗಳು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿವೆ. ಒಂಬತ್ತು ಸಂಘಟನೆಗಳಿಂದ ಕೇವಲ ಮನವಿ ನೀಡುವುದಾಗಿ ಅರ್ಜಿ. ಸಂಘಟನೆಗಳು ಪ್ರತಿಭಟನೆ ನಡೆಸಲು ಸುವರ್ಣಸೌಧದ ಬಳಿ ಟೆಂಟ್ ನಿರ್ಮಾಣ ಮಾಡಿಕೊಂಡಿದ್ದಾರೆ. ನಗರ ಪೊಲೀಸರು 10 ಟೆಂಟ್​​ಗಳನ್ನು ನಿರ್ಮಾಣ ಮಾಡಿದ್ದಾರೆ. ಡಿ.19ರಂದು ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಹೋರಾಟ ನಡೆಸಲಿದ್ದಾರೆ. ಡಿ.21ರಂದು ಮಾದಿಗ ದಂಡೋರ ಸಮಿತಿಯಿಂದ ಹೋರಾಟ. ಡಿ.22ರಂದು ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ ನಡೆಯಲಿದೆ. ಹೋರಾಟಕ್ಕೆ 100 ಎಕರೆ ಪ್ರದೇಶದ ಬೃಹತ್ ಜಾಗ ನಿಗದಿ ಮಾಡಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ