AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ
ಪ್ರಾತಿನಿಧಿಕ ಚಿತ್ರ
Sahadev Mane
| Updated By: ವಿವೇಕ ಬಿರಾದಾರ|

Updated on:Jul 30, 2023 | 9:49 AM

Share

ಬೆಳಗಾವಿ: ಬೆಳಗಾವಿಯ (Belagavi) ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalaga Jail) ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ (Prisoner) ಸ್ಕ್ರೂಡ್ರೈವರ್​ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್​ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್​ ಅವರಿಗೆ ಎದೆ, ಹೊಟ್ಟೆ, ಕಿವಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜೈಲಿನಲ್ಲಿ ನಡೆದ ಈ ಘರ್ಷಣೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಎದರು ಬಿಗಿ ಪೊಲೀಸ್​​ ಭದ್ರತೆ ನಿಯೋಜಿಸಲಾಗಿದೆ.

ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ

ಕಲಬುರಗಿ: ಭಾವೈಕ್ಯತೆಯ ಮೊಹರಂ ಹಬ್ಬವನ್ನು ನಿನ್ನೆ (ಜು.29) ನಾಡಿನಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಹಿಂದೂ-ಮುಸ್ಲಿಂ ಬಾಂಧವರು ಒಟ್ಟಾಗಿ ವಿಜೃಂಭಣೆಯಿಂದ ಆಚರಿಸಿದರು. ಈ ಹಬ್ಬದ ದಿನದಂದೇ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.

ಇದನ್ನೂ ಓದಿ: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು

ಒಂದೇ ಸಮುದಾಯದ ಹೊನಗುಂಟಾ, ಗೋಟಾಳ್ ಕುಟುಂಬಗಳ ನಡುವೆ ಕಲ್ಲು ತೂರಾಟವಾಗಿ ಎಂಟು ಜನರಿಗೆ ಗಾಯಗಳಾಗಿವೆ. ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬದ ನಡುವೆ ಕಳೆದ ಕೆಲ ವರ್ಷಗಳಿಂದ ದ್ವೇಷವಿದ್ದ ಹಿನ್ನೆಲೆ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Sun, 30 July 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ