AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಜಯೇಶ್ ಪೂಜಾರಿಯಿಂದ ಕೋರ್ಟ್​ನಲ್ಲೇ ಪಾಕ್​ಪರ ಘೋಷಣೆ

ಬೆಳಗಾವಿ ಹಿಂಡಲಗಾ ಜೈಲಿನಲ್ಲೇ ಇದ್ದುಕೊಂಡು ಕೇಂದ್ರ ಸಚಿವ ನಿತಿನ್​ ಗಡ್ಕರಿ ಮತ್ತು ಎಡಿಜಿಪಿ ಅಲೋಕ್​ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ನಿತೀಶ್​ ಪೂಜಾರಿ ಇಂದು ಜಿಲ್ಲಾ ನ್ಯಾಯಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ.

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಜಯೇಶ್ ಪೂಜಾರಿಯಿಂದ ಕೋರ್ಟ್​ನಲ್ಲೇ ಪಾಕ್​ಪರ ಘೋಷಣೆ
ಆರೋಪಿ ಜಯೇಶ್​ ಪೂಜಾರಿ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Jun 12, 2024 | 12:50 PM

Share

ಬೆಳಗಾವಿ, ಜೂನ್​​ 12: ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಮತ್ತು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (Alok Kumar) ಅವರಿಗೆ ಜೀವ ಬೆದರಿಕೆ ಹಾಕಿದ್ದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ (Pakistan) ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ವಕೀಲರು ಮತ್ತು ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದರು. ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದರು.

ಆರೋಪಿ ಜಯೇಶ್ ಪೂಜಾರಿ ಈ ಹಿಂದೆ ರಾಜ್ಯ ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಧಿಕಾರಿ ಅಲೋಕ್ ಕುಮಾರ್​ಗೆ ಜೀವ ಬೆದರಿಕೆ ಹಾಗಿದ್ದನು. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದನು.

ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತ ಆರೋಪಿ ಜಯೇಶ್​ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ತಿದುಬಂದಿದೆ.

ಇದನ್ನೂ ಓದಿ: ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೊಳಗಿದ ಪಾಕ್​ ಪರ ಘೋಷಣೆ

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?