AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ಆಗ್ರಹ ಮತ್ತೆ ಮುನ್ನಲೆಗೆ ಬಂದಿದ್ದು, ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಹಾಗೂ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್ 13 ರಂದು ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ಈ ಬಗ್ಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Dec 09, 2023 | 4:06 PM

Share

ಬೆಳಗಾವಿ, ಡಿ.9: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿ. 13 ರಂದು ಬೆಳಗಾವಿಯಲ್ಲಿ (Belagavi) ಲಿಂಗಾಯತ ಪಂಚಮಸಾಲಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಬೆಳಗಾವಿಯ ಗಾಂಧಿ ಭವನದಲ್ಲಿ ಜಮಾವಣೆಗೊಳ್ಳುವಂತೆ ಕರೆ ನೀಡಿದರು. ಗಾಂಧಿ ಭವನದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದರು.

ಪ್ರತಿಭಟನೆ ವೇಳೆ ಜನರು ಸುವರ್ಣಸೌಧಕ್ಕೆ ಹೋಗೋಣ ಅಂದರೆ ಸುವರ್ಣಸೌಧವರೆಗೆ ಪಾದಯಾತ್ರೆ ಮಾಡುತ್ತೇವೆ. ಹಿಂದಿನ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಿತ್ತು. ಆದರೆ ಜಾರಿ ಆಗಿಲ್ಲ. 2ಎ ಮೀಸಲಾತಿ ನೀಡುವ ಬಗ್ಗೆ ಸಿಎಂ ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದರು. ಬಜೆಟ್ ಅಧಿವೇಶನ ವೇಳೆ ಸಿಎಂಗೆ ಸಭೆ ಕರೆಯುವಂತೆ ನಮ್ಮ ಸಮಾಜದ ಮುಖಂಡರು ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ನಮಗೆ ಸ್ಪಂದಿಸಿಲ್ಲ ಎಂದರು.

ಇದನ್ನೂ ಓದಿ: ಬೆಳಗಾವಿ: ಪ್ರತಿಭಟನೆ ನಡೆಸಲು ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಧರಣಿ ನಡೆಸುತ್ತಿರುವ ಶಾಲಾ ಬಾಲಕ

ಬೆಂಗಳೂರಲ್ಲಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ನಮ್ಮ ಸಮಾಜದ ಬಾಂಧವರು ಬಹಳ ಜನ ಇದ್ದಾರೆ. ಅಧಿವೇಶನ ವೇಳೆ ಸಭೆ ಕರೆಯುವಂತೆ ಸಮಾಜದ ಶಾಸಕರು ಮನವಿ ಮಾಡಿದರೂ ಸಿಎಂ ಸ್ಪಂದಿಸಿಲ್ಲ. ಹೀಗಾಗಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದೆ. ಬರಗಾಲ ಇರುವುದರಿಂದ ಜನರಿಗೆ ಪ್ರತಿಭಟನೆಗೆ ಬರುವಂತೆ ಒತ್ತಾಯ ಮಾಡುವುದಿಲ್ಲ. ಮೀಸಲಾತಿ ಹೋರಾಟದಲ್ಲಿ ಆಸಕ್ತಿ ಇರುವವರು ಬನ್ನಿ ಅಂತಾ ವಿನಂತಿ ಮಾಡುತ್ತೇನೆ ಎಂದರು.

ಮೂರು ದಿನಗಳೊಳಗೆ ನಮ್ಮ ಸಮುದಾಯ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತುವ ಪ್ರಯತ್ನ ಮಾಡಲಿ. ನಮ್ಮ ಸಮುದಾಯದ 20 ಶಾಸಕರು ಪಕ್ಷಾತೀತವಾಗಿ ಹೋರಾಟ ಮಾಡಲಿ. ನಾವು ಹೊರಗೆ ಪ್ರತಿಭಟನೆ ಮಾಡಿದರೆ ನೀವು ಸದನದಲ್ಲಿ ಧ್ವನಿ ಎತ್ತಿ ಎಂದು ಪಂಚಮಸಾಲಿ ಸಮುದಾಯದ ಶಾಸಕರಿಗೆ ಬಸವ ಜಯಮೃತ್ಯುಂಜಯ ಶ್ರೀ ಮನವಿ ಮಾಡಿದರು.

ಸಿಎಂ ಬೆಂಗಳೂರಿನಲ್ಲಿ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಇನ್ನೂ ಕಾಲ ಮಿಂಚಿಲ್ಲ. ಅಧಿವೇಶನ ವೇಳೆ ಸಭೆ ಕರೆದು ಚರ್ಚೆ ಮಾಡಬೇಕು. ನಮ್ಮ ಸಮುದಾಯದ ಇಬ್ಬರು ಸಚಿವರು, ಶಾಸಕರು ತಮಗೆ ಮನವಿ ಮಾಡಿದ್ದಾರೆ. ಡಿ.13ರಂದು ನಮ್ಮ ಸಮುದಾಯದ ಎಲ್ಲ ಬಾಂಧವರು ಬೆಳಗಾವಿಯ ಗಾಂಧಿ ಭವನಕ್ಕೆ ಬನ್ನಿ. ಇಲ್ಲಿಯಿಂದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ಮಾಡೋಣ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್