AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗವಾಡದಲ್ಲಿ 3 ತಿಂಗಳಿಂದ ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ.

ಕಾಗವಾಡದಲ್ಲಿ 3 ತಿಂಗಳಿಂದ  ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ
ಮಾಜಿ ಶಾಸಕ ರಾಜು ಕಾಗೆ
TV9 Web
| Updated By: ಆಯೇಷಾ ಬಾನು|

Updated on:Mar 17, 2022 | 6:09 PM

Share

ಚಿಕ್ಕೋಡಿ: ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರ ಪಂಪ್ ಸೆಟ್ ಕೇಬಲ್ ಕಳ್ಳತನವಾಗಿದೆ ಎಂದು ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ಹೊರ ಹಾಕಿದ್ದಾರೆ. ಕಾಗವಾಡ ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಸುಮಾರು 10 ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಹೀಗಾಗಿ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ.

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೆ ಐನಾಪುರ, ಉಗಾರ, ಮೋಳೆ, ಮಂಗಸೂಳಿ, ಕೆಂಪವಾಡ, ಲೊಕುರ, ಕೃಷ್ಣಾ-ಕಿತ್ತೂರ, ಕಾಗವಾಡ, ಶೇಡಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆ. ಲಕ್ಷಾಂತರ ರೂ ಮೌಲ್ಯದ ಬೆಳ್ಳಿ, ಬಂಗಾರ ಸೇರಿದಂತೆ ನಗದು ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಸಾರ್ವಜನಿಕರು ಕಾಗವಾಡ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರೂ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಉಗಾರ ಬಿಕೆ ಹಾಗೂ ಉಗಾರ ಖುರ್ದ ಗ್ರಾಮಗಳಲ್ಲಿಯ ರೈತರು ಕೃಷ್ಣಾ ನದಿಗೆ ಪಂಪ್ ಸೆಟ್ಗಳನ್ನು ಅಳವಡಿಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಕೇಬಲ್ ಕಳ್ಳತನವಾಗಿವೆ. ನನ್ನ ಪಂಪ್ ಸೆಟ್ ಕೇಬಲ್ ಮೂರು ಬಾರಿ ಕಳ್ಳತನವಾಗಿದೆ. ಹಲವಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿ ಠಾಣೆಗೆ ದೂರು ನೀಡಿದ್ರು, ಇದುವರೆಗೆ ಕಳ್ಳರನ್ನು ಬಂಧಿಸಿಲ್ಲ. ಕಾಗವಾಡ ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಬುಧವಾರ ಮಧ್ಯ ರಾತ್ರಿ ಮತ್ತೇ ಉಗಾರ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರು ಅಳವಡಿಸಿದ ಕೇಬಲ್ ಕಳ್ಳತನವಾಗಿವೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ ತಂಡಗಳ ಚಿಂತೆ ಹೆಚ್ಚಿಸಿದ ಸ್ಟಾರ್ ಆಟಗಾರರ ಗಾಯದ ಸಮಸ್ಯೆ..!

ಜರ್ಮನ್​ ಸಂಸತ್ತನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಉಕ್ರೇನ್​ ಅಧ್ಯಕ್ಷ; ಎದ್ದುನಿಂತು ಗೌರವ ಸಲ್ಲಿಸಿದ ಜನಪ್ರತಿನಿಧಿಗಳು

Published On - 5:57 pm, Thu, 17 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ