AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗವಾಡದಲ್ಲಿ 3 ತಿಂಗಳಿಂದ ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ.

ಕಾಗವಾಡದಲ್ಲಿ 3 ತಿಂಗಳಿಂದ  ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ
ಮಾಜಿ ಶಾಸಕ ರಾಜು ಕಾಗೆ
Follow us
TV9 Web
| Updated By: ಆಯೇಷಾ ಬಾನು

Updated on:Mar 17, 2022 | 6:09 PM

ಚಿಕ್ಕೋಡಿ: ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರ ಪಂಪ್ ಸೆಟ್ ಕೇಬಲ್ ಕಳ್ಳತನವಾಗಿದೆ ಎಂದು ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ಹೊರ ಹಾಕಿದ್ದಾರೆ. ಕಾಗವಾಡ ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಸುಮಾರು 10 ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಹೀಗಾಗಿ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ.

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೆ ಐನಾಪುರ, ಉಗಾರ, ಮೋಳೆ, ಮಂಗಸೂಳಿ, ಕೆಂಪವಾಡ, ಲೊಕುರ, ಕೃಷ್ಣಾ-ಕಿತ್ತೂರ, ಕಾಗವಾಡ, ಶೇಡಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆ. ಲಕ್ಷಾಂತರ ರೂ ಮೌಲ್ಯದ ಬೆಳ್ಳಿ, ಬಂಗಾರ ಸೇರಿದಂತೆ ನಗದು ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಸಾರ್ವಜನಿಕರು ಕಾಗವಾಡ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರೂ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಉಗಾರ ಬಿಕೆ ಹಾಗೂ ಉಗಾರ ಖುರ್ದ ಗ್ರಾಮಗಳಲ್ಲಿಯ ರೈತರು ಕೃಷ್ಣಾ ನದಿಗೆ ಪಂಪ್ ಸೆಟ್ಗಳನ್ನು ಅಳವಡಿಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಕೇಬಲ್ ಕಳ್ಳತನವಾಗಿವೆ. ನನ್ನ ಪಂಪ್ ಸೆಟ್ ಕೇಬಲ್ ಮೂರು ಬಾರಿ ಕಳ್ಳತನವಾಗಿದೆ. ಹಲವಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿ ಠಾಣೆಗೆ ದೂರು ನೀಡಿದ್ರು, ಇದುವರೆಗೆ ಕಳ್ಳರನ್ನು ಬಂಧಿಸಿಲ್ಲ. ಕಾಗವಾಡ ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಬುಧವಾರ ಮಧ್ಯ ರಾತ್ರಿ ಮತ್ತೇ ಉಗಾರ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರು ಅಳವಡಿಸಿದ ಕೇಬಲ್ ಕಳ್ಳತನವಾಗಿವೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ ತಂಡಗಳ ಚಿಂತೆ ಹೆಚ್ಚಿಸಿದ ಸ್ಟಾರ್ ಆಟಗಾರರ ಗಾಯದ ಸಮಸ್ಯೆ..!

ಜರ್ಮನ್​ ಸಂಸತ್ತನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಉಕ್ರೇನ್​ ಅಧ್ಯಕ್ಷ; ಎದ್ದುನಿಂತು ಗೌರವ ಸಲ್ಲಿಸಿದ ಜನಪ್ರತಿನಿಧಿಗಳು

Published On - 5:57 pm, Thu, 17 March 22

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ