AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗವಾಡದಲ್ಲಿ 3 ತಿಂಗಳಿಂದ ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ.

ಕಾಗವಾಡದಲ್ಲಿ 3 ತಿಂಗಳಿಂದ  ಪಂಪ್ ಸೆಟ್ ಕೇಬಲ್ ಕಳ್ಳತನ, ಇದು ಪೊಲೀಸರ ವೈಫಲ್ಯ – ಮಾಜಿ ಶಾಸಕ ರಾಜು ಕಾಗೆ ಗರಂ
ಮಾಜಿ ಶಾಸಕ ರಾಜು ಕಾಗೆ
TV9 Web
| Edited By: |

Updated on:Mar 17, 2022 | 6:09 PM

Share

ಚಿಕ್ಕೋಡಿ: ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರ ಪಂಪ್ ಸೆಟ್ ಕೇಬಲ್ ಕಳ್ಳತನವಾಗಿದೆ ಎಂದು ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ಹೊರ ಹಾಕಿದ್ದಾರೆ. ಕಾಗವಾಡ ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಸುಮಾರು 10 ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಹೀಗಾಗಿ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ.

ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಸರಣಿ ಕಳ್ಳತನ ನಡೆಯುತ್ತಿದೆಯಂತೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾಜಿ ಶಾಸಕ ರಾಜು ಕಾಗೆ ಕೇಬಲ್ ಕಳ್ಳತನ ವಿಷಯ ಬಹಿರಂಗ ಪಡಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೆ ಐನಾಪುರ, ಉಗಾರ, ಮೋಳೆ, ಮಂಗಸೂಳಿ, ಕೆಂಪವಾಡ, ಲೊಕುರ, ಕೃಷ್ಣಾ-ಕಿತ್ತೂರ, ಕಾಗವಾಡ, ಶೇಡಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸರಣಿ ಕಳ್ಳತನ ನಡೆಯುತ್ತಿದೆ. ಲಕ್ಷಾಂತರ ರೂ ಮೌಲ್ಯದ ಬೆಳ್ಳಿ, ಬಂಗಾರ ಸೇರಿದಂತೆ ನಗದು ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಸಾರ್ವಜನಿಕರು ಕಾಗವಾಡ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರೂ ಕಳ್ಳರನ್ನು ಬಂಧಿಸುವಲ್ಲಿ ಕಾಗವಾಡ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಉಗಾರ ಬಿಕೆ ಹಾಗೂ ಉಗಾರ ಖುರ್ದ ಗ್ರಾಮಗಳಲ್ಲಿಯ ರೈತರು ಕೃಷ್ಣಾ ನದಿಗೆ ಪಂಪ್ ಸೆಟ್ಗಳನ್ನು ಅಳವಡಿಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಕೇಬಲ್ ಕಳ್ಳತನವಾಗಿವೆ. ನನ್ನ ಪಂಪ್ ಸೆಟ್ ಕೇಬಲ್ ಮೂರು ಬಾರಿ ಕಳ್ಳತನವಾಗಿದೆ. ಹಲವಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿ ಠಾಣೆಗೆ ದೂರು ನೀಡಿದ್ರು, ಇದುವರೆಗೆ ಕಳ್ಳರನ್ನು ಬಂಧಿಸಿಲ್ಲ. ಕಾಗವಾಡ ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಬುಧವಾರ ಮಧ್ಯ ರಾತ್ರಿ ಮತ್ತೇ ಉಗಾರ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಸೇರಿದಂತೆ 18 ಜನ ರೈತರು ಅಳವಡಿಸಿದ ಕೇಬಲ್ ಕಳ್ಳತನವಾಗಿವೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ ತಂಡಗಳ ಚಿಂತೆ ಹೆಚ್ಚಿಸಿದ ಸ್ಟಾರ್ ಆಟಗಾರರ ಗಾಯದ ಸಮಸ್ಯೆ..!

ಜರ್ಮನ್​ ಸಂಸತ್ತನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಉಕ್ರೇನ್​ ಅಧ್ಯಕ್ಷ; ಎದ್ದುನಿಂತು ಗೌರವ ಸಲ್ಲಿಸಿದ ಜನಪ್ರತಿನಿಧಿಗಳು

Published On - 5:57 pm, Thu, 17 March 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ