AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳಿಗಾಗಿ NDRF ಹಣವೂ ಬಳಕೆ: ವಿಪಕ್ಷ ನಾಯಕ ಅಶೋಕ್​ ಆರೋಪ

ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಿಎಂ ಮತ್ತು ಡಿಸಿಎಂ ಮಜಾಮಾಡಿಕೊಂಡು ಇದ್ದಾರೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ವಾಗ್ದಾಳಿ ನಡೆಸಿದ್ದಾರೆ. 4 ತಿಂಗಳಿಗೊಮ್ಮೆ ಬರುವ ಎನ್‌ಡಿಆರ್‌ಎಫ್ ಹಣವನ್ನೂ ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಲಾಗ್ತಿದೆ. ಇವರಿಗೆ ನಾಚಿಕೆ ಆಗಬೇಕು ಎಂದು ಅವರು ಕಿಡಿ ಕಾರಿದ್ದಾರೆ.

ಗ್ಯಾರಂಟಿಗಳಿಗಾಗಿ NDRF ಹಣವೂ ಬಳಕೆ: ವಿಪಕ್ಷ ನಾಯಕ ಅಶೋಕ್​ ಆರೋಪ
ವಿಪಕ್ಷ ನಾಯಕ ಆರ್​. ಅಶೋಕ್​
ಸಹದೇವ್​ ಮಾನೆ
| Edited By: |

Updated on: Oct 03, 2025 | 8:21 PM

Share

ಚಿಕ್ಕೋಡಿ, ಅಕ್ಟೋಬರ್​ 03: ರಾಜ್ಯದಲ್ಲಿ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದ್ದು, 4 ತಿಂಗಳಿಗೊಮ್ಮೆ ಬರುವ ಎನ್‌ಡಿಆರ್‌ಎಫ್ ಹಣವನ್ನೂ ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಲಾಗ್ತಿದೆ. ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದರೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಇನ್ನೂ ಪತ್ರ ಬರೆದಿಲ್ಲ. ಇವರೂ ಹಣ ಕೊಡ್ತಿಲ್ಲ. ಸಿಎಂ ಮತ್ತು ಡಿಸಿಎಂ ಮಜಾಮಾಡಿಕೊಂಡು ಇದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್ (R. Ashok)​ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅಶೋಕ್​, ನವೆಂಬರ್​ ಕ್ರಾಂತಿ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ರಾಜಣ್ಣರಿಗೆ ಗೇಟ್​ ಪಾಸ್​​ ಕೊಟ್ಟಿದ್ದಾರೆ. ಶಿವರಾಮೇಗೌಡ, ರಂಗನಾಥ ಇಬ್ಬರೂ ಡಿಕೆಶಿ ಸಿಎಂ ಆಗ್ತಾರೆ ಅಂತಾ ಹೇಳಿದ್ದು, ಸಿದ್ದರಾಮಯ್ಯನವರು ಸದ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ. ಈ ದಸರಾ ಸಿದ್ದರಾಮಯ್ಯನವರ ಕೊನೆಯ ದಸರಾ. ಡಿಕೆಶಿ, ಡಾ.ಜಿ.ಪರಮೇಶ್ವರ್​, ಸತೀಶ್​ ಜಾರಕಿಹೊಳಿ ಯಾರೇ ಮುಖ್ಯಮಂತ್ರಿ ಆದರೂ ನಮಗೇನು ಆಗ್ಬೇಕಿಲ್ಲ. ಒಟ್ಟಿನಲ್ಲಿ ಸಿದ್ದರಾಮಯ್ಯ ಹೋಗ್ತಾರೆ ಎಂದು ಅವರು ತಿಳಿಸಿದ್ದಾರೆ.

2 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯನವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅಶೋಕ್​, ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಶನಿ ಹೆಗಲೇರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​​ ದೇವಸ್ಥಾನ ಸುತ್ತುತ್ತಾ ಹೋಮ-ಹವನ, ಮಾಟ ಮಂತ್ರ ಎಲ್ಲಾ ಮಾಡಿಸ್ತಿದ್ದಾರೆ. ನವೆಂಬರ್​ನಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಅಶೋಕ್​ ಭವಿಷ್ಯ ನುಡಿದಿದ್ದಾರೆ. ಲೇಖಕಿ ಬಾನು ಮುಷ್ತಾಕ್ ಕರೆಸಿ ಮೈಸೂರು ದಸರಾ ಉದ್ಘಾಟಿಸಿದ್ದು ಸರಿಯಲ್ಲ. ಅವರು ನಡೆಸಿದ ಉದ್ಘಾಟನೆಯನ್ನ ಜನರೇ ಒಪ್ಪಿಲ್ಲ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್