AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳಿಗಾಗಿ NDRF ಹಣವೂ ಬಳಕೆ: ವಿಪಕ್ಷ ನಾಯಕ ಅಶೋಕ್​ ಆರೋಪ

ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಿಎಂ ಮತ್ತು ಡಿಸಿಎಂ ಮಜಾಮಾಡಿಕೊಂಡು ಇದ್ದಾರೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ವಾಗ್ದಾಳಿ ನಡೆಸಿದ್ದಾರೆ. 4 ತಿಂಗಳಿಗೊಮ್ಮೆ ಬರುವ ಎನ್‌ಡಿಆರ್‌ಎಫ್ ಹಣವನ್ನೂ ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಲಾಗ್ತಿದೆ. ಇವರಿಗೆ ನಾಚಿಕೆ ಆಗಬೇಕು ಎಂದು ಅವರು ಕಿಡಿ ಕಾರಿದ್ದಾರೆ.

ಗ್ಯಾರಂಟಿಗಳಿಗಾಗಿ NDRF ಹಣವೂ ಬಳಕೆ: ವಿಪಕ್ಷ ನಾಯಕ ಅಶೋಕ್​ ಆರೋಪ
ವಿಪಕ್ಷ ನಾಯಕ ಆರ್​. ಅಶೋಕ್​
Sahadev Mane
| Edited By: |

Updated on: Oct 03, 2025 | 8:21 PM

Share

ಚಿಕ್ಕೋಡಿ, ಅಕ್ಟೋಬರ್​ 03: ರಾಜ್ಯದಲ್ಲಿ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದ್ದು, 4 ತಿಂಗಳಿಗೊಮ್ಮೆ ಬರುವ ಎನ್‌ಡಿಆರ್‌ಎಫ್ ಹಣವನ್ನೂ ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಲಾಗ್ತಿದೆ. ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದರೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಇನ್ನೂ ಪತ್ರ ಬರೆದಿಲ್ಲ. ಇವರೂ ಹಣ ಕೊಡ್ತಿಲ್ಲ. ಸಿಎಂ ಮತ್ತು ಡಿಸಿಎಂ ಮಜಾಮಾಡಿಕೊಂಡು ಇದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್ (R. Ashok)​ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅಶೋಕ್​, ನವೆಂಬರ್​ ಕ್ರಾಂತಿ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ರಾಜಣ್ಣರಿಗೆ ಗೇಟ್​ ಪಾಸ್​​ ಕೊಟ್ಟಿದ್ದಾರೆ. ಶಿವರಾಮೇಗೌಡ, ರಂಗನಾಥ ಇಬ್ಬರೂ ಡಿಕೆಶಿ ಸಿಎಂ ಆಗ್ತಾರೆ ಅಂತಾ ಹೇಳಿದ್ದು, ಸಿದ್ದರಾಮಯ್ಯನವರು ಸದ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ. ಈ ದಸರಾ ಸಿದ್ದರಾಮಯ್ಯನವರ ಕೊನೆಯ ದಸರಾ. ಡಿಕೆಶಿ, ಡಾ.ಜಿ.ಪರಮೇಶ್ವರ್​, ಸತೀಶ್​ ಜಾರಕಿಹೊಳಿ ಯಾರೇ ಮುಖ್ಯಮಂತ್ರಿ ಆದರೂ ನಮಗೇನು ಆಗ್ಬೇಕಿಲ್ಲ. ಒಟ್ಟಿನಲ್ಲಿ ಸಿದ್ದರಾಮಯ್ಯ ಹೋಗ್ತಾರೆ ಎಂದು ಅವರು ತಿಳಿಸಿದ್ದಾರೆ.

2 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯನವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅಶೋಕ್​, ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಶನಿ ಹೆಗಲೇರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​​ ದೇವಸ್ಥಾನ ಸುತ್ತುತ್ತಾ ಹೋಮ-ಹವನ, ಮಾಟ ಮಂತ್ರ ಎಲ್ಲಾ ಮಾಡಿಸ್ತಿದ್ದಾರೆ. ನವೆಂಬರ್​ನಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಅಶೋಕ್​ ಭವಿಷ್ಯ ನುಡಿದಿದ್ದಾರೆ. ಲೇಖಕಿ ಬಾನು ಮುಷ್ತಾಕ್ ಕರೆಸಿ ಮೈಸೂರು ದಸರಾ ಉದ್ಘಾಟಿಸಿದ್ದು ಸರಿಯಲ್ಲ. ಅವರು ನಡೆಸಿದ ಉದ್ಘಾಟನೆಯನ್ನ ಜನರೇ ಒಪ್ಪಿಲ್ಲ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ