AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಮಹಾನಾಯಕನ ಮೂಲೆಗೆ ತಳ್ಳಲು ಈ ಸಲ ನಿಲ್ತೀನಿ: ಮುಂದಿನ ಬಾರಿ ನಿಮಗೆ ಬಿಟ್ಟಿದ್ದು -ರಾಜಕೀಯ ನಿವೃತ್ತಿ ಬಗ್ಗೆ ರಮೇಶ್ ಜಾರಕಿಹೊಳಿ ಮಾತು

ಆ ಮಹಾನಾಯಕನ ಮೂಲೆಗೆ ಹಚ್ಚುವುದಕ್ಕಾಗಿ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದೇನೆ. ಇಲ್ಲವಾದ್ರೇ ಈ ಸಲ ನಾನು ಸ್ಪರ್ಧೆ ಮಾಡುತ್ತಿರಲಿಲ್ಲ. ಒಂದು ಷಂಡನಂತೆ ರಾಜಕೀಯ ಮಾಡಿದ್ದಾನೆ.

ಆ ಮಹಾನಾಯಕನ ಮೂಲೆಗೆ ತಳ್ಳಲು ಈ ಸಲ ನಿಲ್ತೀನಿ: ಮುಂದಿನ ಬಾರಿ ನಿಮಗೆ ಬಿಟ್ಟಿದ್ದು -ರಾಜಕೀಯ ನಿವೃತ್ತಿ ಬಗ್ಗೆ ರಮೇಶ್ ಜಾರಕಿಹೊಳಿ ಮಾತು
ರಮೇಶ್ ಜಾರಕಿಹೊಳಿ
TV9 Web
| Updated By: ಆಯೇಷಾ ಬಾನು|

Updated on:Jan 30, 2023 | 8:35 AM

Share

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ನಾನಾ ಕಸರತ್ತು ಮಾಡುತ್ತಿದ್ದಾರೆ. ಸದ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi) ಹೊಸ ಬಾಂಬ್ ಸಿಡಿಸಿದ್ದಾರೆ. ಆರು ಬಾರಿ ಶಾಸಕನಾಗಿದ್ದೇನೆ ಏಳನೇ ಬಾರಿ ಶಾಸಕನಾದ ನಂತರ ಎಂಟನೇ ಬಾರಿ ನಿಲ್ಲಬೇಕು, ಬೇಡಾ ಎನ್ನುವ ನಿರ್ಧಾರ ನಿಮ್ಮ ಮೇಲೆ ಬಿಡ್ತೇನಿ ನಾನು ಎಂದು ಹೇಳಿದ್ದಾರೆ. ಈ ಮೂಲಕ ರಾಜಕೀಯ ನಿವೃತ್ತಿಯ ಮಾತನಾಡಿದ್ದಾರೆ.

ಈ ಚುನಾವಣೆ ಅಲ್ಲಾ ಮುಂದಿನ ಬಾರಿ ನಿವೃತ್ತಿಯಾಗಬೇಕು ಅನ್ನೋ ವಿಚಾರ ಇದೆ ನನ್ನದು. ಏಳನೇ ಬಾರಿಯಾದ ಬಳಿಕ ಸಾಕಪ್ಪ ಬೇರೆಯವರಿಗೆ ಚಾನ್ಸ್ ಕೊಡೋಣ. ಮುಂದಿನ ಚುನಾವಣೆ ಮಾತ್ರ ಸ್ಪರ್ಧೆ ಮಾಡಬೇಕು ಅನ್ನೋ ವಿಚಾರ ಇದೆ ನನ್ನದು. ಈ ವಿಚಾರ ನಮ್ಮ ಕಾರ್ಯಕರ್ತರು, ನಾಯಕರಿಗೆ ಬಿಡ್ತೀನಿ. ಈ ಬಾರಿಯೇ ನಾನು ನಿಲ್ಲುತ್ತಿರಲಿಲ್ಲ, ಆ ಮಹಾನಾಯಕನಿಗೆ ಚಾಲೆಂಜ್ ಮಾಡಲು ನಿಂತಿದ್ದೇನೆ. ಆ ಮಹಾನಾಯಕನ ಮೂಲೆಗೆ ಹಚ್ಚುವುದಕ್ಕಾಗಿ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದೇನೆ. ಇಲ್ಲವಾದ್ರೇ ಈ ಸಲ ನಾನು ಸ್ಪರ್ಧೆ ಮಾಡುತ್ತಿರಲಿಲ್ಲ. ಒಂದು ಷಂಡನಂತೆ ರಾಜಕೀಯ ಮಾಡಿದ್ದಾನೆ. ಅವನನ್ನ ಪೂರ್ಣ ಪ್ರಮಾಣದಲ್ಲಿ ಮನೆಗೆ ಹಚ್ಚುವವರೆಗೂ ನಾನು ರಾಜಕೀಯ ನಿವೃತ್ತಿಯಾಗುವುದಿಲ್ಲ. ಬಿಜೆಪಿ ಪಕ್ಷಕ್ಕೆ ನನ್ನ ಜೀವನ ಪಣಕ್ಕಿಟ್ಟು 2023ರಲ್ಲಿ ನಮ್ಮ ಸರ್ಕಾರ ಮಾಡಲು ಏನೇ ತ್ಯಾಗ ಮಾಡಲು ಬಂದ್ರೂ ತ್ಯಾಗ ಮಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡುತ್ತೇವೆ ಎಂದು ಗೋಕಾಕ್​ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Hampi Utsav 2023: ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಅರೆಸ್ಟ್

ಸಿಡಿ ಪ್ರಕರಣದಲ್ಲಿ ಡಿಕೆಶಿ ಕೈವಾಡ ಕುರಿತು ದಾಖಲೆ ಬಿಡುಗಡೆ ಮಾಡಲಿರುವ ರಮೇಶ್

ಇನ್ನು ಮತ್ತೊಂದೆಡೆ ಇಂದು ಬೆಳಗ್ಗೆ 10.30ಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಮಹಾನಾಯಕನಿಗೆ ಸಂಬಂಧಿಸಿದ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸಿಡಿ ಪ್ರಕರಣದಲ್ಲಿ ಡಿಕೆಶಿ ಕೈವಾಡ ಕುರಿತು ದಾಖಲೆ ಬಿಡುಗಡೆ ಮಾಡಲಿದ್ದಾರೆ. ಡಿಕೆಶಿ ವೈಯಕ್ತಿಕ ವಿಚಾರ ಇದೆ ಮಾತನಾಡುತ್ತೇನೆ ಎಂದು ಈ ಹಿಂದೆ ರಮೇಶ್ ಜಾರಕಿಹೊಳಿ ಹೇಳಿದ್ದರು. ಈ ಬೆನ್ನಲ್ಲೆ ಬೆಳಗ್ಗೆ 10.30ಕ್ಕೆ ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ನನ್ನ ಸ್ನೇಹಿತ ರಮೇಶ್ ಜಾರಕಿಹೊಳಿಯನ್ನು ಬೆತ್ತಲೆ ಮಾಡಿದ್ದೇನೆ. ಅದಕ್ಕಾಗಿ 40 ಕೋಟಿ ಹಣ ಖರ್ಚು ಮಾಡಿದ್ದೇನೆ ಅಂದಿದ್ದ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ‘ಅವಳಿಗೆ 1 ಕೋಟಿ ಕೊಡು’ ಎಂದು ಹೇಳಿರುವ ಆಡಿಯೋ ಇದೆ ಎಂದು ರಮೇಶ್​ ಹೇಳಿದ್ದಾರೆ.

ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್. ಮಹಾನಾಯಕನ ಷಂ_ ರಾಜಕೀಯದ ವಿರುದ್ಧ ನನ್ನ ಹೋರಾಟವಿದೆ ಎಂದು ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ರೊಚ್ಚಿಗೆದ್ದಿದ್ದರು. 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಯಾವುದೇ ತ್ಯಾಗಕ್ಕೂ ಸಿದ್ಧ. 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಲು ಈ ಬಾರಿ ನನ್ನ ಸ್ಪರ್ಧೆ ಎಮದು ಹೇಳಿಕೆ ನೀಡಿದ್ದರು. ಇದರ ನಡುವೆ ಇಂದು ಸುದ್ದಿಗೋಷ್ಠಿ ಕರೆದಿದ್ದು ಡಿಕೆ ಶಿವಕುಮಾರ್ ಸಂಬಂಧ ಅನೇಕ ವಿಚಾರಗಳು ಬಹಿರಂಗಗೊಳ್ಳಲಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:41 am, Mon, 30 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ