AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ ಪ್ರಕರಣ: ಗಲಾಟೆ ವೇಳೆ ಚನ್ನರಾಜ ಹಟ್ಟಿಹೊಳಿ ಕಾರು ಪತ್ತೆ

prithvi singh Asselt Case: ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಅವರ ಅತ್ಯಾಪ್ತ ಪೃಥ್ವಿ ಸಿಂಗ್ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಈ ಕೃತ್ಯದ ಹಿಂದೆ ಕಾಂಗ್ರೆಸ್ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಹೆಸರು ಕೇಳಿಬಂದಿದೆ. ಇದೀಗ ಇದಕ್ಕೆ ಪುಷ್ಠಿ ನೀಡುವಂತೆ ಗಲಾಟೆ ನಡೆದ ಸಮಯದಲ್ಲೇ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಮನೆ ಬಳಿ ಚನ್ನರಾಜ ಹಟ್ಟಿಹೊಳಿ ಓಡಾಡಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ.

Sahadev Mane
| Edited By: |

Updated on:Dec 05, 2023 | 9:00 AM

Share

ಬೆಳಗಾವಿ, (ಡಿಸೆಂಬರ್ 05): ಒಂದೆಡೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಡೀ ಸರ್ಕಾರ, ವಿರೋಧ ಪಕ್ಷ ಬೆಳಗಾವಿಯಲ್ಲಿದೆ (Belagavi). ಇದರ ನಡುವೆ ರಮೇಶ್ ಜಾರಕಿಹೊಳಿ (Ramesh Jarkiholi) ಆಪ್ತ ಬಿಜೆಪಿ ಎಸ್​ಸಿ ಮೋರ್ಚಾದ ಕಾರ್ಯಕರ್ತ ಪೃಥ್ವಿ ಸಿಂಗ್​ಗೆ ಚಾಕು ಇರಿಯಲಾಗಿದೆ. ಅದರಲ್ಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಹಾಗೂ ಆಪ್ತರಾದ ಸುಜಯ್, ಸದ್ದಾಂ ದಾಳಿ ಮಾಡಿದ್ದಾರೆ ಎಂದು ದಾಳಿಗೊಳಗಾದ ಪೃಥ್ವಿ ಸಿಂಗ್ ಆರೋಪಿಸಿದ್ದಾರೆ. ಆದ್ರೆ, ಇದನ್ನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಚನ್ನರಾಜ ಅಲ್ಲಗೆಳೆದಿದ್ದಾರೆ. ಆದ್ರೆ, ಗಲಾಟೆ ವೇಳೆ ಪೃಥ್ವಿ ಮನೆ ಬಳಿ ಚನ್ನರಾಜ ಹಟ್ಟಿಹೊಳಿ ಕಾರು ಓಡಾಡಿದ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಬಿಜೆಪಿ ಮುಖಂಡ ಪೃಥ್ವಿಸಿಂಗ್​ ಮನೆ ಬಳಿ ಚನ್ನರಾಜ ಹಟ್ಟಿಹೊಳಿ ಕಾರು ಪತ್ತೆಯಾಗಿದೆ.ಬೆಳಗಾವಿಯ ಜಯನಗರದಲ್ಲಿರೋ ಪೃಥ್ವಿಸಿಂಗ್​ ಮನೆ ಬಳಿ ಚನ್ನರಾಜ ಹಟ್ಟಿಹೊಳಿ ಅವರ ಕಪ್ಪು ಬಣ್ಣದ ಇನ್ನೋವಾ ಕಾರು ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದು ಟಿವಿ9ಗೆ ಸಿಕ್ಕಿದೆ.

ಇದನ್ನೂ ಓದಿ: ಪೃಥ್ವಿ ಸಿಂಗ್ ನಟೋರಿಯಸ್ ಫೆಲೋ, ಸುಳ್ಳು ಹೇಳುತ್ತಿದ್ದಾನೆ: ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ

ಸೋಮವಾರ ಸಂಜೆ 4.51ರ ವೇಳೆ ಕಾರಿ​ನಲ್ಲಿ ಚನ್ನರಾಜ ಹಟ್ಟಿಹೊಳಿ ತೆರಳಿದ ದೃಶ್ಯವು ಸಹ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆರೋಪಗಳಿಗೆ ಸಿಸಿಟಿವಿ ದೃಶ್ಯ ಪುಷ್ಠಿ ನೀಡಿದಂತಿದೆ. ಹಾಗಾದ್ರೆ, ಗಲಾಟೆ ವೇಳೆ ಚನ್ನರಾಜ ಹಟ್ಟಿಹೊಳಿ ಸ್ಥಳದಲ್ಲೇ ಇದ್ರಾ ಎನ್ನುವ ಎನ್ನುವ ಶಂಕೆ ವ್ಯಕ್ತವಾಗಿದೆ. ಮುಂದೆ ನಿಂತುಕೊಂಡೇ ಹಲ್ಲೆ ಮಾಡಿಸಿದ್ರಾ? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ.

ಘಟನೆ ನಡೆದು 14 ಗಂಟೆಯಾದರೂ ದಾಖಲಾಗದ ಕೇಸ್

ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಮತ್ತು ಬೆಂಬಲಿಗರಿಂದ ಹಲ್ಲೆ ಆಗಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಆದ್ರೆ, ಈ ವರೆಗೂ ಪೊಲೀಸರು ಕೂಡ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ಘಟನೆ ನಡೆದ 14 ಗಂಟೆಗಳ ಕಳೆದರೂ ಸಹ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೃಥ್ವಿ ಸಿಂಗ್ ಕುಟುಂಬಸ್ಥರು ಕೇಸ್ ನೀಡುತ್ತಿಲ್ಲ ಎಂದು ಎಪಿಎಂಸಿ ಠಾಣೆ ಪೊಲೀಸರು, ಇದುವರೆಗೂ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ. ಇತ್ತ ಕುಟುಂಬಸ್ಥರು ಅಳೆದು ತೂಗಿ ಕೇಸ್ ನೀಡಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ರಮೇಶ್​ ಜಾರಕಿಹೊಳಿ ಅತ್ಯಾಪ್ತ ಬಿಜೆಪಿ ಮುಖಂಡನಿಗೆ ಚಾಕು ಇರಿತ; ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಆಪ್ತರಿಂದ ಕೃತ್ಯ

ಇನ್ನು ಇನ್ನೇನು ಕೆಲವೇ ಕ್ಷಣಗಳಲ್ಲಿ ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ಆಪ್ತನ ಆರೋಗ್ಯ ವಿಚಾರಿಸಲಿದ್ದು, ಇದು ರಾಜಕೀಯವಾಗಿ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 am, Tue, 5 December 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು