AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ
ಕೈಯಲ್ಲಿ ಸೀಮೆಎಣ್ಣೆ ಹಿಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು
TV9 Web
| Updated By: guruganesh bhat|

Updated on:Sep 13, 2021 | 8:00 PM

Share

ಬೆಳಗಾವಿ: ವಿದ್ಯಾರ್ಥಿಗಳ ಪ್ರತಿಭಟನೆಯ ಒತ್ತಡಕ್ಕೆ ಮಣಿದು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಿ ಕುಲಪತಿ ರಾಮಚಂದ್ರಗೌಡ ಆದೇಶಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲೇ ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕ ನಿಗದಿಪಡಿಸಿರುವ ಕಾರಣ ಪರೀಕ್ಷೆ ಮುಂದೂಡುವಂತೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎದುರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ. ಈ ಪರೀಕ್ಷೆಗಳ ನಡುವೆಯೇ ಬಿಎಡ್ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆ ವೇಳೆ ಸೀಮೆಎಣ್ಣೆ ಡಬ್ಬಿ ಕೈಯಲ್ಲಿ ಹಿಡಿದಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ವಿಶ್ವವಿದ್ಯಾಲಯ ಮಣಿದಿದೆ. ಪರೀಕ್ಷೆಗಳನ್ನು ಮುಂದೂಡಿದೆ. ಸದ್ಯ ಮುಂದೂಡಲ್ಪಟ್ಟಿರುವ ಪರೀಕ್ಷೆಗಳನ್ನು ನಡೆಸಲು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ವಿಶ್ವವಿದ್ಯಾಲಯ ಭರವಸೆ ನೀಡಿದೆ.

ಇದನ್ನೂ ಓದಿ: 

ಗದಗ: ಮಳೆ ಬಂದರೆ ಹಳ್ಳದ ದಡದ ಮೇಲೆ ವಿದ್ಯಾರ್ಥಿಗಳು ಕಾಯಬೇಕು! ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ICAI CA Result 2021: ಇಂದು ಸಿಎ ಫೌಂಡೇಶನ್​ ಮತ್ತು ಫೈನಲ್​ ಪರೀಕ್ಷೆಗಳ ಫಲಿತಾಂಶ ಪ್ರಕಟ ಸಾಧ್ಯತೆ; ಆನ್​ಲೈನ್​ ಮೂಲಕ ನೋಡುವ ವಿಧಾನ ಹೀಗಿದೆ

(Rani Channamma University exams postponed due to Students Protest)

Published On - 7:59 pm, Mon, 13 September 21

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು