AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ
ಕೈಯಲ್ಲಿ ಸೀಮೆಎಣ್ಣೆ ಹಿಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು
TV9 Web
| Edited By: |

Updated on:Sep 13, 2021 | 8:00 PM

Share

ಬೆಳಗಾವಿ: ವಿದ್ಯಾರ್ಥಿಗಳ ಪ್ರತಿಭಟನೆಯ ಒತ್ತಡಕ್ಕೆ ಮಣಿದು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಿ ಕುಲಪತಿ ರಾಮಚಂದ್ರಗೌಡ ಆದೇಶಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲೇ ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕ ನಿಗದಿಪಡಿಸಿರುವ ಕಾರಣ ಪರೀಕ್ಷೆ ಮುಂದೂಡುವಂತೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎದುರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ. ಈ ಪರೀಕ್ಷೆಗಳ ನಡುವೆಯೇ ಬಿಎಡ್ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆ ವೇಳೆ ಸೀಮೆಎಣ್ಣೆ ಡಬ್ಬಿ ಕೈಯಲ್ಲಿ ಹಿಡಿದಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ವಿಶ್ವವಿದ್ಯಾಲಯ ಮಣಿದಿದೆ. ಪರೀಕ್ಷೆಗಳನ್ನು ಮುಂದೂಡಿದೆ. ಸದ್ಯ ಮುಂದೂಡಲ್ಪಟ್ಟಿರುವ ಪರೀಕ್ಷೆಗಳನ್ನು ನಡೆಸಲು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ವಿಶ್ವವಿದ್ಯಾಲಯ ಭರವಸೆ ನೀಡಿದೆ.

ಇದನ್ನೂ ಓದಿ: 

ಗದಗ: ಮಳೆ ಬಂದರೆ ಹಳ್ಳದ ದಡದ ಮೇಲೆ ವಿದ್ಯಾರ್ಥಿಗಳು ಕಾಯಬೇಕು! ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ICAI CA Result 2021: ಇಂದು ಸಿಎ ಫೌಂಡೇಶನ್​ ಮತ್ತು ಫೈನಲ್​ ಪರೀಕ್ಷೆಗಳ ಫಲಿತಾಂಶ ಪ್ರಕಟ ಸಾಧ್ಯತೆ; ಆನ್​ಲೈನ್​ ಮೂಲಕ ನೋಡುವ ವಿಧಾನ ಹೀಗಿದೆ

(Rani Channamma University exams postponed due to Students Protest)

Published On - 7:59 pm, Mon, 13 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ