AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಗಲಾಟೆ; ರಾತ್ರೋರಾತ್ರಿ ಒಂಟಿ ಮಹಿಳೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ

ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವೊಂದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಒಂಟಿ ಮಹಿಳೆ ಮನೆಗೆ ರಾತ್ರಿ 11 ಗಂಟೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಧಾರುಣ ಘಟನೆ ರಾಯಬಾಗ(Raybag) ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಗಲಾಟೆ; ರಾತ್ರೋರಾತ್ರಿ ಒಂಟಿ ಮಹಿಳೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ
ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್|

Updated on: Mar 12, 2024 | 2:58 PM

Share

ಬೆಳಗಾವಿ, ಮಾ.12: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವೊಂದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ರಾಯಬಾಗ(Raybag) ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಒಂಟಿ ಮಹಿಳೆ ಮನೆಗೆ ರಾತ್ರಿ 11 ಗಂಟೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಧಾರುಣ ಘಟನೆ ನಡೆದಿದ್ದು, ಗುಂಪು ಕಟ್ಟಿಕೊಂಡು ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗಂಡನನ್ನ ಆಸ್ಪತ್ರೆಗೆ ದಾಖಲಿಸಿ ಮಕ್ಕಳೊಂದಿಗೆ ಮನೆಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ

ಇನ್ನು ಫೆ.23ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಮೀನಿನಲ್ಲಿ ನೀರು ಹರಿಸುವ ವಿಚಾರಕ್ಕೆ ಹಲ್ಲೆಗೊಳಗಾದ ಮಂಜುಳಾ ಅವರ ಗಂಡ ನಾಗಪ್ಪನ ಮೇಲೆ ಮೊದಲು ಪಕ್ಕದ ಜಮೀನಿನವರಾದ ಹಾಲಪ್ಪ ಹುಕ್ಕೇರಿ ಕುಟುಂಬಸ್ಥರು ಹಲ್ಲೆ ನಡೆಸಿದ್ದರು. ಬಳಿಕ ಗಂಡನನ್ನ ಆಸ್ಪತ್ರೆಗೆ ದಾಖಲಿಸಿ ಹಲ್ಲೆಗೊಳಗಾದ ಮಂಜುಳಾ, ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ರಾತ್ರಿ 11 ಗಂಟೆಗೆ ನಾಗಪ್ಪನ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

ಇದನ್ನೂ ಓದಿ:ವಂಟಮೂರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಚಾರ್ಜ್​​ಶೀಟ್ ಸಲ್ಲಿಕೆಗೆ CID ಸಿದ್ಧತೆ, ಆರೋಪಿಗಳ ವಿರುದ್ಧವೇ ಮಗಳ ಹೇಳಿಕೆ

ಮಹಿಳೆ ಮೇಲೆ 9 ಜನರಿಂದ ಹಲ್ಲೆ

ಕಲ್ಲು ತೂರಾಟ ಬಳಿಕ ಮನೆಯಿಂದ ಹೊರ ಬರ್ತಿದ್ದಂತೆ ಮಂಜುಳಾ ಅವರ ಮೇಲೆ ಹಾಲಪ್ಪ ಹುಕ್ಕೇರಿ, ಯಲ್ಲಪ್ಪ ಹುಕ್ಕೇರಿ, ಕುಮಾರ್ ಬಾಳಪ್ಪ ಹುಕ್ಕೇರಿ, ಲಕ್ಷ್ಮೀ ಹುಕ್ಕೇರಿ ಸೇರಿ ಒಂಬತ್ತು ಜನರು ಹಲ್ಲೆ ನಡೆಸಿದ್ದಾರೆ. ಮಹಿಳೆ ಮೇಲೆ ಹಲ್ಲೆ ಮಾಡುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆಗೊಳಗಾಗಿ ಆಸ್ಪತ್ರೆ ಪಾಲಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಈ ಹಿನ್ನಲೆ ನೊಂದ ಕುಟುಂಬ, ನ್ಯಾಯಕ್ಕಾಗಿ ಬೆಳಗಾವಿ ಎಸ್​ಪಿ ಕಚೇರಿಗೆ ಆಗಮಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ