AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಗಲಾಟೆ; ರಾತ್ರೋರಾತ್ರಿ ಒಂಟಿ ಮಹಿಳೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ

ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವೊಂದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಒಂಟಿ ಮಹಿಳೆ ಮನೆಗೆ ರಾತ್ರಿ 11 ಗಂಟೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಧಾರುಣ ಘಟನೆ ರಾಯಬಾಗ(Raybag) ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಗಲಾಟೆ; ರಾತ್ರೋರಾತ್ರಿ ಒಂಟಿ ಮಹಿಳೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ
ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 12, 2024 | 2:58 PM

Share

ಬೆಳಗಾವಿ, ಮಾ.12: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವೊಂದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ರಾಯಬಾಗ(Raybag) ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಜಮೀನಿಗೆ ನೀರು ಹರಿಸುವ ವಿಚಾರಕ್ಕೆ ಒಂಟಿ ಮಹಿಳೆ ಮನೆಗೆ ರಾತ್ರಿ 11 ಗಂಟೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಧಾರುಣ ಘಟನೆ ನಡೆದಿದ್ದು, ಗುಂಪು ಕಟ್ಟಿಕೊಂಡು ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗಂಡನನ್ನ ಆಸ್ಪತ್ರೆಗೆ ದಾಖಲಿಸಿ ಮಕ್ಕಳೊಂದಿಗೆ ಮನೆಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ

ಇನ್ನು ಫೆ.23ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಮೀನಿನಲ್ಲಿ ನೀರು ಹರಿಸುವ ವಿಚಾರಕ್ಕೆ ಹಲ್ಲೆಗೊಳಗಾದ ಮಂಜುಳಾ ಅವರ ಗಂಡ ನಾಗಪ್ಪನ ಮೇಲೆ ಮೊದಲು ಪಕ್ಕದ ಜಮೀನಿನವರಾದ ಹಾಲಪ್ಪ ಹುಕ್ಕೇರಿ ಕುಟುಂಬಸ್ಥರು ಹಲ್ಲೆ ನಡೆಸಿದ್ದರು. ಬಳಿಕ ಗಂಡನನ್ನ ಆಸ್ಪತ್ರೆಗೆ ದಾಖಲಿಸಿ ಹಲ್ಲೆಗೊಳಗಾದ ಮಂಜುಳಾ, ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ರಾತ್ರಿ 11 ಗಂಟೆಗೆ ನಾಗಪ್ಪನ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

ಇದನ್ನೂ ಓದಿ:ವಂಟಮೂರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಚಾರ್ಜ್​​ಶೀಟ್ ಸಲ್ಲಿಕೆಗೆ CID ಸಿದ್ಧತೆ, ಆರೋಪಿಗಳ ವಿರುದ್ಧವೇ ಮಗಳ ಹೇಳಿಕೆ

ಮಹಿಳೆ ಮೇಲೆ 9 ಜನರಿಂದ ಹಲ್ಲೆ

ಕಲ್ಲು ತೂರಾಟ ಬಳಿಕ ಮನೆಯಿಂದ ಹೊರ ಬರ್ತಿದ್ದಂತೆ ಮಂಜುಳಾ ಅವರ ಮೇಲೆ ಹಾಲಪ್ಪ ಹುಕ್ಕೇರಿ, ಯಲ್ಲಪ್ಪ ಹುಕ್ಕೇರಿ, ಕುಮಾರ್ ಬಾಳಪ್ಪ ಹುಕ್ಕೇರಿ, ಲಕ್ಷ್ಮೀ ಹುಕ್ಕೇರಿ ಸೇರಿ ಒಂಬತ್ತು ಜನರು ಹಲ್ಲೆ ನಡೆಸಿದ್ದಾರೆ. ಮಹಿಳೆ ಮೇಲೆ ಹಲ್ಲೆ ಮಾಡುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆಗೊಳಗಾಗಿ ಆಸ್ಪತ್ರೆ ಪಾಲಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಈ ಹಿನ್ನಲೆ ನೊಂದ ಕುಟುಂಬ, ನ್ಯಾಯಕ್ಕಾಗಿ ಬೆಳಗಾವಿ ಎಸ್​ಪಿ ಕಚೇರಿಗೆ ಆಗಮಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು