AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ

ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ರಾಯಬಾಗ ತಾಲೂಕಿನ ಮುಗಳಖೋಡ ಬಳಿಯ ಜತ್ತ-ಜಾಂಬೋಟಿ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ
ರಾಯಭಾಗ ಭೀಕರ ಅಪಘಾತ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 23, 2024 | 7:42 PM

Share

ಬೆಳಗಾವಿ, ಫೆ.23: ಅಪಘಾತ ಕುರಿತು ಸಂಚಾರ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ(16), ಲಕ್ಷ್ಮೀ ಮರಾಠೆ(19 ), ಆಕಾಶ್ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ್ ಪಡತರಿ(22) ಹಾಗೂ ಮುಗಳಖೋಡ ನಿವಾಸಿ ನಾಗಪ್ಪ ಯಡವನ್ನವರ್(48) ಮೃತರು. ಬೈಕ್‌ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್, ಕಾರು ನಡುವೆ ಅಪಘಾತ; ಇಬ್ಬರು ಸಾವು

ಮೈಸೂರು: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು​ ಸವಾರರು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕಿನ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್(50) ಹಾಗೂ ವೆಂಕಟೇಶ್(48) ಮೃತ ರ್ದುದೈವಿಗಳು. ಟಿ ನರಸೀಪುರದ ಕಡೆಯಿಂದ ಬರುತ್ತಿದ್ದ ಬೈಕ್​ಗೆ ಹಿಂದಿನಿಂದ ಬಂದ ಡಿಕ್ಕಿ ಹೊಡೆದಿದೆ. ಈ ಹಿನ್ನಲೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು

ಪ್ರದಕ್ಷಿಣೆ ಹಾಕುವಾಗ ಹೃದಯಾಘಾತದಿಂದ ವಿದೇಶಿಗ ಸಾವು

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ದೇಗುಲದಲ್ಲಿ ಪ್ರದಕ್ಷಿಣೆ ಹಾಕುವಾಗ ಹೃದಯಘಾತದಿಂದ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ರಷ್ಯಾ ಮೂಲದ ಅಲೆಗ್ಸಾಂಡರ್ ತನೆಗಾ(71) ಮೃತ ರ್ದುದೈವಿ. ಮೂವರು ಸ್ನೇಹಿತರೊಂದಿಗೆ ಗೋವಾ, ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Fri, 23 February 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ