ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 23, 2024 | 7:42 PM

ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ರಾಯಬಾಗ ತಾಲೂಕಿನ ಮುಗಳಖೋಡ ಬಳಿಯ ಜತ್ತ-ಜಾಂಬೋಟಿ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ
ರಾಯಭಾಗ ಭೀಕರ ಅಪಘಾತ
Follow us on

ಬೆಳಗಾವಿ, ಫೆ.23: ಅಪಘಾತ ಕುರಿತು ಸಂಚಾರ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ(16), ಲಕ್ಷ್ಮೀ ಮರಾಠೆ(19 ), ಆಕಾಶ್ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ್ ಪಡತರಿ(22) ಹಾಗೂ ಮುಗಳಖೋಡ ನಿವಾಸಿ ನಾಗಪ್ಪ ಯಡವನ್ನವರ್(48) ಮೃತರು. ಬೈಕ್‌ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್, ಕಾರು ನಡುವೆ ಅಪಘಾತ; ಇಬ್ಬರು ಸಾವು

ಮೈಸೂರು: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು​ ಸವಾರರು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕಿನ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್(50) ಹಾಗೂ ವೆಂಕಟೇಶ್(48) ಮೃತ ರ್ದುದೈವಿಗಳು. ಟಿ ನರಸೀಪುರದ ಕಡೆಯಿಂದ ಬರುತ್ತಿದ್ದ ಬೈಕ್​ಗೆ ಹಿಂದಿನಿಂದ ಬಂದ ಡಿಕ್ಕಿ ಹೊಡೆದಿದೆ. ಈ ಹಿನ್ನಲೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು,
ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು

ಪ್ರದಕ್ಷಿಣೆ ಹಾಕುವಾಗ ಹೃದಯಾಘಾತದಿಂದ ವಿದೇಶಿಗ ಸಾವು

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ದೇಗುಲದಲ್ಲಿ ಪ್ರದಕ್ಷಿಣೆ ಹಾಕುವಾಗ ಹೃದಯಘಾತದಿಂದ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ರಷ್ಯಾ ಮೂಲದ ಅಲೆಗ್ಸಾಂಡರ್ ತನೆಗಾ(71) ಮೃತ ರ್ದುದೈವಿ. ಮೂವರು ಸ್ನೇಹಿತರೊಂದಿಗೆ ಗೋವಾ, ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Fri, 23 February 24