AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಳೆ: ಜಲಪಾತಗಳ ಸಮೀಪ ಭೇಟಿಗೆ ನಿರ್ಬಂಧ, ಕಾಳಜಿ ಕೇಂದ್ರಕ್ಕೆ ತೆರಳಲು ನದಿ ತೀರದ ಜನರಿಗೆ ಸೂಚನೆ

ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಜಲಪಾತಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ. 2019 ರಲ್ಲಿ ಉಂಟಾಗಿದ್ದ ಪ್ರವಾಹ ಮತ್ತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹೇಳಿದ್ದಾರೆ.

ಬೆಳಗಾವಿ ಮಳೆ: ಜಲಪಾತಗಳ ಸಮೀಪ ಭೇಟಿಗೆ ನಿರ್ಬಂಧ, ಕಾಳಜಿ ಕೇಂದ್ರಕ್ಕೆ ತೆರಳಲು ನದಿ ತೀರದ ಜನರಿಗೆ ಸೂಚನೆ
ನಿರಂತರ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿರುವ ಜಲಪಾತಗಳ ಸಮೀಪ ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ (ಫೋಟೋ: ಗೋಕಾಕ್ ಫಾಲ್ಸ್) Image Credit source: billiontrips
TV9 Web
| Edited By: |

Updated on: Jul 27, 2023 | 7:47 PM

Share

ಬೆಳಗಾವಿ, ಜುಲೈ 27: ಉಡುಪಿಯಲ್ಲಿ ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ  ಬೆನ್ನಲ್ಲೇ ಎಚ್ಚೆತ್ತ ಬೆಳಗಾವಿ (Belagavi) ಜಿಲ್ಲಾಡಳಿತವು ಜಲಪಾತದ ಸಮೀಪ ಪ್ರವಾಸಿಗರು ಹೋಗುವುದನ್ನು ನಿರ್ಬಂಧಿಸಿದೆ. ಆದರೆ ದೂರದಿಂದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಪೊಲೀಸರು ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಇನ್ನು, ಮುಂಜಾಗ್ರತಾ ಕ್ರಮಗಳ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರದಲ್ಲಿ ಸತತ ಒಂದು ವಾರದಿಂದ ಮಳೆ ಆಗುತ್ತಿದೆ. ಜೀವಹಾನಿ, ಮನೆಹಾನಿ ಆದರೆ ಕೂಡಲೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ನದಿ ತೀರದಲ್ಲಿರುವವರು ಮುಂಚಿತವಾಗಿ ಕಾಳಜಿ ಕೇಂದ್ರಕ್ಕೆ ತೆರಳಬೇಕು. ಬಾರವಾಡ ಗ್ರಾಮದಲ್ಲಿ ಎರಡು ಕುಟುಂಬ ಸ್ಥಳಾಂತರ ಮಾಡಲಾಗಿದೆ ಎಂದರು.

ಇದನ್ನೂ ಓದಿ: ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ

ಎಲ್ಲಾ ಇಲಾಖೆಗಳ ಅಧಿಕಾರಿಗಳ ಮಧ್ಯೆ ಸಮನ್ವಯತೆ ಇರಬೇಕು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳೆ ಹಾನಿ ಆದ ರೈತರಿಗೆ SDRF, NDRF ನಿಯಮದಡಿ ಪರಿಹಾರ ನೀಡಲಾಗುವುದು. ಮಳೆಯಿಂದಾದ ಹಾನಿಗೆ ಪರಿಹಾರ ನೀಡಲು ಹಣದ ಕೊರತೆ ಇಲ್ಲ. ಮನೆ ಬಿದ್ದವರಿಗೆ ಸದ್ಯ ಎನ್‌ಡಿಆರ್‌ಎಫ್ ನಿಯಮಾವಳಿ ಪರಿಹಾರ ನೀಡಲಾಗುವುದು ಎಂದರು.

ಕೆಳಹಂತದ ಸೇತುವೆಗಳ ಬಳಿ ಎತ್ತರದ ಸೇತುವೆ ಬೇಗ ಕಾಮಗಾರಿ ಮಾಡುತ್ತಾರೆ. ಶಿಥಿಲಾವ್ಯಸ್ಥೆಯ ಶಾಲೆ, ಆಸ್ಪತ್ರೆಗಳ ದುರಸ್ತಿಗೆ ಸೂಚನೆ ನೀಡಲಾಗಿದೆ ಎಂದು ಅಂಜುಮ್ ಪರ್ವೇಜ್ ಹೇಳಿದರು. ಮಹಾರಾಷ್ಟ್ರದ ಯಾವುದೇ ಡ್ಯಾಂಗಳು ಭರ್ತಿ ಆಗಿಲ್ಲ, ಸದ್ಯಕ್ಕೆ ನೀರು ಬಿಡುಗಡೆ ಮಾಡುತ್ತಿಲ್ಲ, ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ಮೂರು ಹೊತ್ತು ಸಂಪರ್ಕದಲ್ಲಿ ಇದ್ದೇವೆ. ನಮ್ಮ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಅಲ್ಲಿಗೆ ಹೋಗುತ್ತಾರೆ. 2019ರಲ್ಲಿ ಪ್ರವಾಹದಿಂದ ಪಾಠ ಕಲಿತಿದ್ದು, ಅದರ ಅನುಭವ ಮೇಲೆ ಅಂತಹ ಪರಿಸ್ಥಿತಿ ಆಗಲು ಬಿಡಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು