AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಳೆ: ಜಲಪಾತಗಳ ಸಮೀಪ ಭೇಟಿಗೆ ನಿರ್ಬಂಧ, ಕಾಳಜಿ ಕೇಂದ್ರಕ್ಕೆ ತೆರಳಲು ನದಿ ತೀರದ ಜನರಿಗೆ ಸೂಚನೆ

ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಜಲಪಾತಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ. 2019 ರಲ್ಲಿ ಉಂಟಾಗಿದ್ದ ಪ್ರವಾಹ ಮತ್ತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹೇಳಿದ್ದಾರೆ.

ಬೆಳಗಾವಿ ಮಳೆ: ಜಲಪಾತಗಳ ಸಮೀಪ ಭೇಟಿಗೆ ನಿರ್ಬಂಧ, ಕಾಳಜಿ ಕೇಂದ್ರಕ್ಕೆ ತೆರಳಲು ನದಿ ತೀರದ ಜನರಿಗೆ ಸೂಚನೆ
ನಿರಂತರ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿರುವ ಜಲಪಾತಗಳ ಸಮೀಪ ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ (ಫೋಟೋ: ಗೋಕಾಕ್ ಫಾಲ್ಸ್) Image Credit source: billiontrips
TV9 Web
| Edited By: |

Updated on: Jul 27, 2023 | 7:47 PM

Share

ಬೆಳಗಾವಿ, ಜುಲೈ 27: ಉಡುಪಿಯಲ್ಲಿ ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ  ಬೆನ್ನಲ್ಲೇ ಎಚ್ಚೆತ್ತ ಬೆಳಗಾವಿ (Belagavi) ಜಿಲ್ಲಾಡಳಿತವು ಜಲಪಾತದ ಸಮೀಪ ಪ್ರವಾಸಿಗರು ಹೋಗುವುದನ್ನು ನಿರ್ಬಂಧಿಸಿದೆ. ಆದರೆ ದೂರದಿಂದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಪೊಲೀಸರು ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಇನ್ನು, ಮುಂಜಾಗ್ರತಾ ಕ್ರಮಗಳ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರದಲ್ಲಿ ಸತತ ಒಂದು ವಾರದಿಂದ ಮಳೆ ಆಗುತ್ತಿದೆ. ಜೀವಹಾನಿ, ಮನೆಹಾನಿ ಆದರೆ ಕೂಡಲೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ನದಿ ತೀರದಲ್ಲಿರುವವರು ಮುಂಚಿತವಾಗಿ ಕಾಳಜಿ ಕೇಂದ್ರಕ್ಕೆ ತೆರಳಬೇಕು. ಬಾರವಾಡ ಗ್ರಾಮದಲ್ಲಿ ಎರಡು ಕುಟುಂಬ ಸ್ಥಳಾಂತರ ಮಾಡಲಾಗಿದೆ ಎಂದರು.

ಇದನ್ನೂ ಓದಿ: ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ

ಎಲ್ಲಾ ಇಲಾಖೆಗಳ ಅಧಿಕಾರಿಗಳ ಮಧ್ಯೆ ಸಮನ್ವಯತೆ ಇರಬೇಕು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳೆ ಹಾನಿ ಆದ ರೈತರಿಗೆ SDRF, NDRF ನಿಯಮದಡಿ ಪರಿಹಾರ ನೀಡಲಾಗುವುದು. ಮಳೆಯಿಂದಾದ ಹಾನಿಗೆ ಪರಿಹಾರ ನೀಡಲು ಹಣದ ಕೊರತೆ ಇಲ್ಲ. ಮನೆ ಬಿದ್ದವರಿಗೆ ಸದ್ಯ ಎನ್‌ಡಿಆರ್‌ಎಫ್ ನಿಯಮಾವಳಿ ಪರಿಹಾರ ನೀಡಲಾಗುವುದು ಎಂದರು.

ಕೆಳಹಂತದ ಸೇತುವೆಗಳ ಬಳಿ ಎತ್ತರದ ಸೇತುವೆ ಬೇಗ ಕಾಮಗಾರಿ ಮಾಡುತ್ತಾರೆ. ಶಿಥಿಲಾವ್ಯಸ್ಥೆಯ ಶಾಲೆ, ಆಸ್ಪತ್ರೆಗಳ ದುರಸ್ತಿಗೆ ಸೂಚನೆ ನೀಡಲಾಗಿದೆ ಎಂದು ಅಂಜುಮ್ ಪರ್ವೇಜ್ ಹೇಳಿದರು. ಮಹಾರಾಷ್ಟ್ರದ ಯಾವುದೇ ಡ್ಯಾಂಗಳು ಭರ್ತಿ ಆಗಿಲ್ಲ, ಸದ್ಯಕ್ಕೆ ನೀರು ಬಿಡುಗಡೆ ಮಾಡುತ್ತಿಲ್ಲ, ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ಮೂರು ಹೊತ್ತು ಸಂಪರ್ಕದಲ್ಲಿ ಇದ್ದೇವೆ. ನಮ್ಮ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಅಲ್ಲಿಗೆ ಹೋಗುತ್ತಾರೆ. 2019ರಲ್ಲಿ ಪ್ರವಾಹದಿಂದ ಪಾಠ ಕಲಿತಿದ್ದು, ಅದರ ಅನುಭವ ಮೇಲೆ ಅಂತಹ ಪರಿಸ್ಥಿತಿ ಆಗಲು ಬಿಡಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು