AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ನಿವೃತ್ತ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ! ದಂಡ ಪಾವತಿಸದಿದ್ರೆ ಪತ್ನಿ ಆಸ್ತಿಯ ಮುಟ್ಟುಗೋಲಿಗೆ ಆದೇಶ

ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಮೋಹನ ಪ್ರಭು ಅವರು ಸುದೀರ್ಘ ವಿಚಾರಣೆಯ ಬಳಿಕ ಇಂದು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಲು ಸಹ ಆದೇಶ ಹೊರಡಿಸಿದ್ದಾರೆ.

RTO ನಿವೃತ್ತ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ! ದಂಡ ಪಾವತಿಸದಿದ್ರೆ ಪತ್ನಿ ಆಸ್ತಿಯ ಮುಟ್ಟುಗೋಲಿಗೆ ಆದೇಶ
RTO ನಿವೃತ್ತ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ! ದಂಡ ಪಾವತಿಸದಿದ್ರೆ ಪತ್ನಿ ಆಸ್ತಿಯ ಮುಟ್ಟುಗೋಲಿಗೆ ಆದೇಶ
TV9 Web
| Edited By: ಸಾಧು ಶ್ರೀನಾಥ್​|

Updated on:Sep 20, 2022 | 9:33 PM

Share

ಬೆಳಗಾವಿ: ನಿವೃತ್ತಿಯಾಗಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು 63 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಬೆಳಗಾವಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ನಿವೃತ್ತ ಸಾರಿಗೆ ಅಧಿಕಾರಿ ಪಿ. ಶಾಂತಕುಮಾರ ಶಿಕ್ಷೆಗೆ ಒಳಗಾದ ನಿವೃತ್ತ ಅಧಿಕಾರಿ. ಶಾಂತಕುಮಾರ ಪ್ರಸ್ತುತ ಬೆಳಗಾವಿ ‌ನಗರದ ಆಂಜನೇಯ ನಗರದಲ್ಲಿ ವಾಸವಾಗಿದ್ದಾರೆ. ಶಾಂತಕುಮಾರ ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್‌ದವರು.

ಬೀದರ ಜಿಲ್ಲೆಯ ಹುಮನಾಬಾದ್ ಆರ್‌ಟಿಓ ಆಗಿದ್ದಾಗ ಭ್ರಷ್ಟಾಚಾರ ನಡೆಸಿದ್ದರು. ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದರು. ಈ ಸಂಬಂಧ ಗುಪ್ತ ಮಾಹಿತಿ ಕಲೆ ಹಾಕಿದ್ದ ಲೋಕಾಯುಕ್ತ ಎಸ್ಪಿ ಆರ್.ಕೆ. ಪಾಟೀಲ್‌ ಅವರು ಶಾಂತಕುಮಾರ ಮನೆಯ ಮೇಲೆ ದಾಳಿ ಮಾಡಿ, ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು.

ಲೋಕಾಯುಕ್ತ ಅಧಿಕಾರಿಗಳು 2010 ಮೇ 3 ರಂದು ಪಿ. ಶಾಂತಕುಮಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ನಡೆಸಿದ್ದ ಬೆಳಗಾವಿ ಲೋಕಾಯುಕ್ತ ಎಸ್ಪಿ ಆರ್. ಬಿ. ಹವಾಲ್ದಾರ್ ಅವರು 1.14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಮೋಹನ ಪ್ರಭು ಅವರು ಸುದೀರ್ಘ ವಿಚಾರಣೆಯ ಬಳಿಕ ಇಂದು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಲು ಸಹ ಆದೇಶ ಹೊರಡಿಸಿದ್ದಾರೆ.

ಅಶ್ಲೀಲ ವಿಡಿಯೋ ಕಳಿಸಿ ಹಿರಿಯ ಪೊಲೀಸ್ ಅಧಿಕಾರಿಗೇ ಬ್ಲ್ಯಾಕ್ ಮೇಲ್!

ಬೆಂಗಳೂರು: ಅಶ್ಲೀಲ ವಿಡಿಯೋ ಕಳಿಸಿ ಪೊಲೀಸ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸೈಬರ್ ವಂಚಕರಿಂದ ವಿಐಪಿ ಸೆಕ್ಯೂರಿಟಿ ಎಸಿಪಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಇದಾಗಿದೆ. ವಂಚಕರು ಮೊದಮೊದಲು ವಾಟ್ಸಪ್ ಮೂಲಕ ಹಾಯ್, ಹಲೋ ಅಂತ ಮೇಸೆಜ್ ಕಳಿಸಿದ್ದರು. ವಂಚಕರ ಆ ಮೊಬೈಲ್‌ ಸಂಖ್ಯೆಯಿದ್ದ ವಾಟ್ಸ್ಯಾಪ್‌ ಡಿಸ್​ಪ್ಲೇ ಇಮೇಜ್​ಗೆ ಹುಡುಗಿಯ ಫೋಟೋ ಹಾಕಲಾಗಿತ್ತು. ಡಿಪಿ ಪೋಟೋ ಎಸಿಪಿಗೆ ಸಂಬಂಧಿಯಾಗಿರುವ ಯುವತಿಯೊಬ್ಬರ ಮುಖಚರ್ಯೆಗೆ ಹೋಲುವಂತಿತ್ತು. ಹೀಗಾಗಿ ಯಾವುದೇ ಅನುಮಾನಪಡದೆ ಸಂತ್ರಸ್ತ ಎಸಿಪಿ, ವಾಟ್ಸ್ಯಾಪ್‌ ಸಂದೇಶಕ್ಕೆ ಪ್ರತಿಕ್ರಿಯಿಸಿಬಿಟ್ಟಿದ್ದಾರೆ.

‘ಹೊಸ ಸಿಮ್‌ ಕಾರ್ಡ್‌ ತೆಗೆದುಕೊಂಡಿದ್ದೀರಾ?’ ಎಂದು ತಮ್ಮ ಸಂಬಂಧಿ ಯುವತಿಯನ್ನು ಎಸಿಪಿ ಪ್ರಶ್ನಿಸಿದ್ದಾರೆ. ಅದಾದ ಮೆಲೆ ವಂಚಕರು ಎಸಿಪಿಯ ಮೊಬೈಲ್‌ಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿಗಳು ಮುಂದೆ ಎಸಿಪಿ ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಎಸಿಪಿ ಕುತೂಹಲದಿಂದ ವಿಡಿಯೋ ಕರೆ ಸ್ವೀಕರಿಸಿದಾಗ ಯುವತಿಯೊಬ್ಬಳು ಮಾತನಾಡಿದ್ದಳು. ಆ ಯುವತಿ ನಗ್ನಳಾಗಿ ತನ್ನ ದೇಹ ಪ್ರದರ್ಶಿಸಿದ್ದಳು. ಇದರಿಂದ ಗಾಬರಿಯಾದ ಎಸಿಪಿ ಕಾಲ್ ಕಟ್ ಮಾಡಿದ್ದಾರೆ.

ಇಷ್ಟೆಲ್ಲಾ ಆದ ಮೆಲೆ, ನಗ್ನ ಯುವತಿಯ ಜತೆ ವಿಡಿಯೋ ಕರೆಯಲ್ಲಿ ಸಂಭಾಷಣೆ ನಡೆಸಿರುವ ದೃಶ್ಯಾವಳಿಯನ್ನು ಚಿತ್ರೀಕರಿಸಿಕೊಂಡಿದ್ದೇವೆ. ಆ ವಿಡಿಯೋ ಫೇಸ್‌ಬುಕ್‌, ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುತ್ತೇವೆ ಎಂದು ಕಿರಾತಕರು ಬೆದರಿಕೆ ಹಾಕಿದ್ದಾರೆ. ಬಳಿಕ, ತಾವು ಪೊಲೀಸ್ ಎಂದೂ ಹೇಳಿಕೊಂಡು ಬೆದರಿಕೆ ಹಾಕಿದ್ದರು ಅದೇ ಕಿಡಿಗೇಡಿಗಳು! ಸೈಬರ್ ಖದೀಮರ ಕಿರುಕುಳ ತಾಳಲಾರದೇ ಕೊನೆಗೆ ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ಬಾಧಿತ ಎಸಿಪಿ ದೂರು ನೀಡಿದ್ದಾರೆ. ಸೆಂಟ್ರಲ್ ಸಿಇಎನ್ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Published On - 9:28 pm, Tue, 20 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ