AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಚನ ಆಲಿಸಿ ತೆರಳುತ್ತಿದ್ದ ಅಣ್ಣ-ತಂಗಿಯ ಬೈಕ್​ಗೆ ಕಾರು ಡಿಕ್ಕಿ, ತಂಗಿ ಸ್ಥಳದಲ್ಲೇ ಸಾವು; ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು

ಅಪಘಾತದಲ್ಲಿ ಭಾರತಿ ಕರೋಶಿ ಕೊನೆಯುಸಿರೆಳೆದ ನತದೃಷ್ಟ ಯುವತಿ. ಬೈಕ್ ಚಲಾಯಿಸುತ್ತಿದ್ದ ಅಣ್ಣ ಶಿವಾನಂದ ಗಾಯಗೊಂಡಿದ್ದು, ಗೋಕಾಕ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ.

ಪ್ರವಚನ ಆಲಿಸಿ ತೆರಳುತ್ತಿದ್ದ ಅಣ್ಣ-ತಂಗಿಯ ಬೈಕ್​ಗೆ ಕಾರು ಡಿಕ್ಕಿ, ತಂಗಿ ಸ್ಥಳದಲ್ಲೇ ಸಾವು; ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Apr 30, 2022 | 5:29 PM

Share

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದಲ್ಲಿ ಮಡ್ಡಿ ಮಲ್ಲಿಕಾರ್ಜುನ ದೇವಸ್ಥಾನ ಬಳಿ ಶುಕ್ರವಾರ ರಾತ್ರಿ 11 ಗಂಟೆಯಲ್ಲಿ ಅಣ್ಣ-ತಂಗಿ ತೆರಳುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ತಂಗಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಅಪಘಾತದಲ್ಲಿ ಭಾರತಿ ಕರೋಶಿ (19) ಕೊನೆಯುಸಿರೆಳೆದ ನತದೃಷ್ಟ ಯುವತಿ. ಬೈಕ್ ಚಲಾಯಿಸುತ್ತಿದ್ದ ಅಣ್ಣ ಶಿವಾನಂದ ಗಾಯಗೊಂಡಿದ್ದು, ಗೋಕಾಕ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವ ಜಯಂತಿ, ಮಲ್ಲಿಕಾರ್ಜುನ ದೇವರ ಜಾತ್ರೆ ಅಂಗವಾಗಿ ಅಣ್ಣ ತಂಗಿ ಪ್ರವಚನ ಆಲಿಸಿ ಮನೆಗೆ ಬರುತ್ತಿದ್ದರು.

ಹೊಸನಿಜಗಲ್ ಗ್ರಾಮದಲ್ಲಿ ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊಸನಿಜಗಲ್ ಗ್ರಾಮ ಗ್ರಾಮದ ಅಂಜನೇಯ ದೇವಾಲಯ ಬಳಿ ವಿದ್ಯುತ್​ ಪ್ರವಹಿಸಿ ವೆಲ್ಡರ್​, ಕೂತಘಟ್ಟದ ಫೈರೋಜ್ (35) ಮೃತಪಟ್ಟಿದ್ದಾರೆ. ಚಾವಣಿಗೆ ಪೈಪ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿದೆ. ಹೈ ವೋಲ್ಟೇಜ್ ಲೈನ್ ನಿಂದ ಸಂಪರ್ಕ ಪಡೆದು ಕೆಲಸ ಮಾಡುವ ವೇಳೆ ವೆಲ್ಡರ್ ಅಸುನೀಗಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಕರ್ನಾಟಕ ಕುರಿತಾದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ 

Also Read: ಉತ್ತರ ಕರ್ನಾಟಕದ ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸ್ತಿದಾರೆ -ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್

Also Read: ಆರ್ಥಿಕತೆ ಉತ್ತಮವಾಗಿದೆ, ಬಿಸಿಲು ಭಯಂಕರವಾಗಿದೆ; ಹಾಗಾಗಿ ವಿದ್ಯುತ್​ ಬೇಡಿಕೆ ಅಗಾಧವಾಗಿದೆ- ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ