AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಚನ ಆಲಿಸಿ ತೆರಳುತ್ತಿದ್ದ ಅಣ್ಣ-ತಂಗಿಯ ಬೈಕ್​ಗೆ ಕಾರು ಡಿಕ್ಕಿ, ತಂಗಿ ಸ್ಥಳದಲ್ಲೇ ಸಾವು; ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು

ಅಪಘಾತದಲ್ಲಿ ಭಾರತಿ ಕರೋಶಿ ಕೊನೆಯುಸಿರೆಳೆದ ನತದೃಷ್ಟ ಯುವತಿ. ಬೈಕ್ ಚಲಾಯಿಸುತ್ತಿದ್ದ ಅಣ್ಣ ಶಿವಾನಂದ ಗಾಯಗೊಂಡಿದ್ದು, ಗೋಕಾಕ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ.

ಪ್ರವಚನ ಆಲಿಸಿ ತೆರಳುತ್ತಿದ್ದ ಅಣ್ಣ-ತಂಗಿಯ ಬೈಕ್​ಗೆ ಕಾರು ಡಿಕ್ಕಿ, ತಂಗಿ ಸ್ಥಳದಲ್ಲೇ ಸಾವು; ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Apr 30, 2022 | 5:29 PM

Share

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದಲ್ಲಿ ಮಡ್ಡಿ ಮಲ್ಲಿಕಾರ್ಜುನ ದೇವಸ್ಥಾನ ಬಳಿ ಶುಕ್ರವಾರ ರಾತ್ರಿ 11 ಗಂಟೆಯಲ್ಲಿ ಅಣ್ಣ-ತಂಗಿ ತೆರಳುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ತಂಗಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಅಪಘಾತದಲ್ಲಿ ಭಾರತಿ ಕರೋಶಿ (19) ಕೊನೆಯುಸಿರೆಳೆದ ನತದೃಷ್ಟ ಯುವತಿ. ಬೈಕ್ ಚಲಾಯಿಸುತ್ತಿದ್ದ ಅಣ್ಣ ಶಿವಾನಂದ ಗಾಯಗೊಂಡಿದ್ದು, ಗೋಕಾಕ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವ ಜಯಂತಿ, ಮಲ್ಲಿಕಾರ್ಜುನ ದೇವರ ಜಾತ್ರೆ ಅಂಗವಾಗಿ ಅಣ್ಣ ತಂಗಿ ಪ್ರವಚನ ಆಲಿಸಿ ಮನೆಗೆ ಬರುತ್ತಿದ್ದರು.

ಹೊಸನಿಜಗಲ್ ಗ್ರಾಮದಲ್ಲಿ ವಿದ್ಯುತ್​ ಪ್ರವಹಿಸಿ ವೆಲ್ಡರ್​ ಸಾವು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊಸನಿಜಗಲ್ ಗ್ರಾಮ ಗ್ರಾಮದ ಅಂಜನೇಯ ದೇವಾಲಯ ಬಳಿ ವಿದ್ಯುತ್​ ಪ್ರವಹಿಸಿ ವೆಲ್ಡರ್​, ಕೂತಘಟ್ಟದ ಫೈರೋಜ್ (35) ಮೃತಪಟ್ಟಿದ್ದಾರೆ. ಚಾವಣಿಗೆ ಪೈಪ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿದೆ. ಹೈ ವೋಲ್ಟೇಜ್ ಲೈನ್ ನಿಂದ ಸಂಪರ್ಕ ಪಡೆದು ಕೆಲಸ ಮಾಡುವ ವೇಳೆ ವೆಲ್ಡರ್ ಅಸುನೀಗಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಕರ್ನಾಟಕ ಕುರಿತಾದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ 

Also Read: ಉತ್ತರ ಕರ್ನಾಟಕದ ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸ್ತಿದಾರೆ -ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್

Also Read: ಆರ್ಥಿಕತೆ ಉತ್ತಮವಾಗಿದೆ, ಬಿಸಿಲು ಭಯಂಕರವಾಗಿದೆ; ಹಾಗಾಗಿ ವಿದ್ಯುತ್​ ಬೇಡಿಕೆ ಅಗಾಧವಾಗಿದೆ- ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ