AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತ: ಬೆಳಗಾವಿ-ಮೀರಜ್ ನಡುವೆ ಹೆಚ್ಚುವರಿ ರೈಲು ಓಡಾಟ

ಭಾರಿ ಮಳೆಗೆ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಈ ಹಿನ್ನಲೆ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿಕೊಡಲಾಗಿದೆ.

ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತ: ಬೆಳಗಾವಿ-ಮೀರಜ್ ನಡುವೆ ಹೆಚ್ಚುವರಿ ರೈಲು ಓಡಾಟ
ಬೆಳಗಾವಿ-ಮೀರಜ್ ರೈಲು ಸೇವೆ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2024 | 10:20 PM

Share

ಬೆಳಗಾವಿ, ಜು.30: ಕರ್ನಾಟಕ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಕೆಲವೆಡೆ ಗುಡ್ಡ ಕುಸಿದು ಅಥವಾ ಪ್ರವಾಹದಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ನಾಳೆಯಿಂದ ಆಗಸ್ಟ್ 4ರವರೆಗೆ ಪ್ರತಿ ದಿನ 2 ಟ್ರಿಪ್ ಬೆಳಗಾವಿ-ಮೀರಜ್ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ(V Somanna) ಮಾಹಿತಿ ನೀಡಿದ್ದಾರೆ.

ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ ವಿ ಸೋಮಣ್ಣ

ಇದನ್ನೂ ಓದಿ:ಹಾಸನ: ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ.

ವೇಳಾಪಟ್ಟಿ ಹೀಗಿದೆ

ಬೆಳಗಾವಿ-ಮೀರಜ್ ರೈಲು‌: ಪ್ರತಿದಿನ ಬೆಳಿಗ್ಗೆ 6.00 ಕ್ಕೆ ಹೊರಟು 9.00 ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50 ಕ್ಕೆ ಮೀರಜ್’ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೀರಜ್ ರೈಲು : ಮಧ್ಯಾಹ್ನ 1.30 ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30 ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.35 ಕ್ಕೆ ಮೀರಜ್’ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ತಲುಪಲಿದೆ.

ನಾಳೆ(ಜುಲೈ 31) ಯಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸದುಪಯೋಗ ಪಡೆಸಿಕೊಳ್ಳಬೇಕೆಂದು ಸಚಿವ ವಿ ಸೋಮಣ್ಣ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ
Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!