AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತ: ಬೆಳಗಾವಿ-ಮೀರಜ್ ನಡುವೆ ಹೆಚ್ಚುವರಿ ರೈಲು ಓಡಾಟ

ಭಾರಿ ಮಳೆಗೆ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಈ ಹಿನ್ನಲೆ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿಕೊಡಲಾಗಿದೆ.

ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತ: ಬೆಳಗಾವಿ-ಮೀರಜ್ ನಡುವೆ ಹೆಚ್ಚುವರಿ ರೈಲು ಓಡಾಟ
ಬೆಳಗಾವಿ-ಮೀರಜ್ ರೈಲು ಸೇವೆ
ಕಿರಣ್​ ಹನಿಯಡ್ಕ
| Edited By: |

Updated on: Jul 30, 2024 | 10:20 PM

Share

ಬೆಳಗಾವಿ, ಜು.30: ಕರ್ನಾಟಕ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಕೆಲವೆಡೆ ಗುಡ್ಡ ಕುಸಿದು ಅಥವಾ ಪ್ರವಾಹದಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ನಾಳೆಯಿಂದ ಆಗಸ್ಟ್ 4ರವರೆಗೆ ಪ್ರತಿ ದಿನ 2 ಟ್ರಿಪ್ ಬೆಳಗಾವಿ-ಮೀರಜ್ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ(V Somanna) ಮಾಹಿತಿ ನೀಡಿದ್ದಾರೆ.

ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ ವಿ ಸೋಮಣ್ಣ

ಇದನ್ನೂ ಓದಿ:ಹಾಸನ: ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ.

ವೇಳಾಪಟ್ಟಿ ಹೀಗಿದೆ

ಬೆಳಗಾವಿ-ಮೀರಜ್ ರೈಲು‌: ಪ್ರತಿದಿನ ಬೆಳಿಗ್ಗೆ 6.00 ಕ್ಕೆ ಹೊರಟು 9.00 ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50 ಕ್ಕೆ ಮೀರಜ್’ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೀರಜ್ ರೈಲು : ಮಧ್ಯಾಹ್ನ 1.30 ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30 ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.35 ಕ್ಕೆ ಮೀರಜ್’ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ತಲುಪಲಿದೆ.

ನಾಳೆ(ಜುಲೈ 31) ಯಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸದುಪಯೋಗ ಪಡೆಸಿಕೊಳ್ಳಬೇಕೆಂದು ಸಚಿವ ವಿ ಸೋಮಣ್ಣ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?