AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಖಾನಾಪುರದಲ್ಲಿ ಪ್ರಾರ್ಥನೆ ವೇಳೆ ಕುಸಿದ ಶಾಲಾ ಕೊಠಡಿಯ ಮೇಲ್ಛಾವಣಿ, ಗೋಡೆ

ಪಶ್ವಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಬೆಳಗಾವಿ ಮೇಲೂ ಬೀರುತ್ತಿದೆ. ಖಾನಾಪುರ ತಾಲೂಕಿನ ಬ್ಯಾಡರಟ್ಟಿಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುತ್ತಿದ್ದಾಗ ಶಾಲೆಯ ಕೊಠಡಿ ಮತ್ತು ಮೇಲ್ಛಾವಣಿ ಕುಸಿತಗೊಂಡ ಘಟನೆ ನಡೆದಿದೆ.

Sahadev Mane
| Edited By: |

Updated on:Jul 28, 2023 | 5:41 PM

Share

ಬೆಳಗಾವಿ, ಜುಲೈ 28: ಪಶ್ವಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಇದರ ಪರಿಣಾಮ ಬೆಳಗಾವಿ (Belagavi) ಜಿಲ್ಲೆಯ ಮೇಲೂ ಬೀರುತ್ತಿದೆ. ನಿರಂತರ ಮಳೆಗೆ ಮನೆಗಳು ಕುಸಿಯುತ್ತಿವೆ. ಇದೀಗ, ಪ್ರಾರ್ಥನೆ ವೇಳೆ ಶಾಲಾ ಕೊಠಡಿಯ ಮೇಲ್ಛಾವಣಿ ಮತ್ತು ಗೋಡೆ ಕುಸಿದ ಘಟನೆ ಖಾನಾಪುರ ತಾಲೂಕಿನ ಬ್ಯಾಡರಟ್ಟಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು‌ ಎಂದಿನಂತೆ ಶಾಲೆಗಳು ಆರಂಭವಾಗಿದೆ. ಅದರಂತೆ, ಬ್ಯಾಡರಟ್ಟಿಯಲ್ಲಿನ ಶಾಲೆಯಲ್ಲಿ ವಿದ್ಯಾರ್ಥಿಗಳು ಹೊರಭಾಗದಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಈ ವೇಳೆ ತರಗತಿಯೊಂದರ ಮೇಲ್ಛಾವಣಿ ಮತ್ತು ಗೋಡೆ ಕುಸಿತಗೊಂಡಿದೆ. ಅದೃಷ್ಟವಶಾತ್ 20 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Chikkodi Hospital Leaking: ಬೆಳಗ್ಗೆಯಿಂದ ಭಾರೀ ಮಳೆ, ಸೋರುತ್ತಿದೆ ನೋಡಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ!

ಶಾಲಾ ಕೊಠಡಿಗಳು ಶಿಥಿಲಗೊಂಡಿರುವ ಹಿನ್ನೆಲೆ ಹೊಸ ಕಟ್ಟಡ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಮನವಿ‌ ಮಾಡಿದ್ದರು. ಆದರೆ ಡಿಡಿಪಿಐ ಬಸವರಾಜ ನಾಲತವಾಡ ಅವರು ಈವರೆಗೂ ಮನವಿಗೆ ಸ್ಪಂದಿಸದೆ ಬೇಜವಾಬ್ದಾರಿತನ ತೋರಿದ್ದಾರೆ. ಇಂದು ಗೋಡೆ ಮತ್ತು ಮೇಲ್ಛಾವಣಿ ಕುಸಿತಗೊಂಡಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕಲು ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 28 July 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ