AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ

ಮಿದುಳು‌ ನಿಷ್ಕ್ರಿಯಗೊಂಡ ಆರ್.ಎಸ್.ಎಸ್ ಕಾರ್ಯಕರ್ತ ತನ್ನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ
ಸಾವಿನಲ್ಲೂ ಸಾರ್ಥಕಥೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ; ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ
TV9 Web
| Edited By: |

Updated on:Mar 16, 2022 | 5:06 PM

Share

ಬೆಳಗಾವಿ: ಜಿಲ್ಲೆಯಲ್ಲೊಬ್ಬರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ‌. ಮಿದುಳು‌ ನಿಷ್ಕ್ರಿಯಗೊಂಡ ಆರ್.ಎಸ್.ಎಸ್ ಕಾರ್ಯಕರ್ತ ತನ್ನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಬೆಳಗಾವಿಯ ಮಹಾಬಲೇಶ್ವರ ನಗರದ ನಿವಾಸಿ ಉಮೇಶ್ ದಂಡಗಿ (51) ಅಂಗಾಂಗ ದಾನ ಮಾಡಿದವರು. ಕೆಲ ದಿನಗಳ ಹಿಂದೆ ಮನೆಯಲ್ಲಿ ಆಕಸ್ಮಿಕವಾಗಿ ಕೆಳ ಜಾರಿ ಬಿದ್ದು ಉಮೇಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗೆಂದು ತಕ್ಷಣ ಇವರನ್ನ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಇವರ ಮೆದುಳು ನಿಷ್ಕ್ರಿಯಗೊಂಡಿರುವ ವಿಚಾರ ಗೊತ್ತಾಗಿದೆ. ಆಗ ಉಮೇಶ್ ದಂಡಗಿ ಅವರು ಮತ್ತು ಕುಟುಂಬಸ್ಥರು ಅಂಗಾಗ ದಾನ ಮಾಡಲು ಮುಂದಾಗಿದ್ದು ಇಂದು ಅವರ ಕಿಡ್ನಿ, ಹೃದಯ ಮತ್ತು ಲಿವರ್ ದಾನ ಮಾಡಿ 6 ಜನರ ಪಾಲಿಗೆ ಬೆಳಕಾಗಿದ್ದಾರೆ. ಅವಶ್ಯಕತೆ ಇದ್ದಲ್ಲಿ ಝೀರೋ ಟ್ರಾಫಿಕ್‌ನಲ್ಲಿ ಉಮೇಶ್ ದಂಡಗಿ ಅಂಗಾಂಗಗಳ ರವಾನಿಸಲಾಯಿತು. ಇನ್ನೂ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲೇ ಇರುವ ರೋಗಿಗೆ ಹೃದಯ ದಾನ ಹಾಗೂ ಇಬ್ಬರು ಅಂಧರಿಗೆ ಕಣ್ಣುಗಳನ್ನು ನೀಡಲಾಗಿದೆ.

ವಿಮಾನದ ಮೂಲಕ ಬೆಂಗಳೂರಿಗೆ ಲೀವರ್ ರವಾನಿಸಲಾಯಿತು. ಕೆಎಲ್‌ಇ ಆಸ್ಪತ್ರೆಯಿಂದ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಝೀರೋ ಟ್ರಾಫಿಕ್‌ನಲ್ಲಿ ಲೀವರ್ ರವಾನಿಸಲಾಯಿತು. ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಒಂದು ಕಿಡ್ನಿ, ಹುಬ್ಬಳ್ಳಿ ತತ್ವಾದರ್ಶ ಆಸ್ಪತ್ರೆಗೆ ಒಂದು ಕಿಡ್ನಿಯನ್ನ ಎರಡು ಪ್ರತ್ಯೇಕ ಆ್ಯಂಬುಲೆನ್ಸ್‌ ಮೂಲಕ ರವಾನಿಸಲಾಯಿತು. ಉಮೇಶ್ ಅವರ ಈ ಮಹಾತ್ಕಾರ್ಯಕ್ಕೆ ಎಲ್ಲ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಇವರಿಂದ ಅಂಗಾಂಗ ದಾನ ಪಡೆದ ರೋಗಿಯ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ.

ವರದಿ: ಸಹದೇವ ಮಾನೆ, ಟಿವಿ9 ಬೆಳಗಾವಿ

ಇದನ್ನೂ ಓದಿ: ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ

5 ವರ್ಷಗಳ ಇ-ಟೂರಿಸ್ಟ್ ವೀಸಾಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಮರುಸ್ಥಾಪಿಸಿದ ಕೇಂದ್ರ ಸರ್ಕಾರ

Published On - 5:00 pm, Wed, 16 March 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು