AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ

ಮಿದುಳು‌ ನಿಷ್ಕ್ರಿಯಗೊಂಡ ಆರ್.ಎಸ್.ಎಸ್ ಕಾರ್ಯಕರ್ತ ತನ್ನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ
ಸಾವಿನಲ್ಲೂ ಸಾರ್ಥಕಥೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ; ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ
TV9 Web
| Updated By: ಆಯೇಷಾ ಬಾನು|

Updated on:Mar 16, 2022 | 5:06 PM

Share

ಬೆಳಗಾವಿ: ಜಿಲ್ಲೆಯಲ್ಲೊಬ್ಬರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ‌. ಮಿದುಳು‌ ನಿಷ್ಕ್ರಿಯಗೊಂಡ ಆರ್.ಎಸ್.ಎಸ್ ಕಾರ್ಯಕರ್ತ ತನ್ನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಬೆಳಗಾವಿಯ ಮಹಾಬಲೇಶ್ವರ ನಗರದ ನಿವಾಸಿ ಉಮೇಶ್ ದಂಡಗಿ (51) ಅಂಗಾಂಗ ದಾನ ಮಾಡಿದವರು. ಕೆಲ ದಿನಗಳ ಹಿಂದೆ ಮನೆಯಲ್ಲಿ ಆಕಸ್ಮಿಕವಾಗಿ ಕೆಳ ಜಾರಿ ಬಿದ್ದು ಉಮೇಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗೆಂದು ತಕ್ಷಣ ಇವರನ್ನ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಇವರ ಮೆದುಳು ನಿಷ್ಕ್ರಿಯಗೊಂಡಿರುವ ವಿಚಾರ ಗೊತ್ತಾಗಿದೆ. ಆಗ ಉಮೇಶ್ ದಂಡಗಿ ಅವರು ಮತ್ತು ಕುಟುಂಬಸ್ಥರು ಅಂಗಾಗ ದಾನ ಮಾಡಲು ಮುಂದಾಗಿದ್ದು ಇಂದು ಅವರ ಕಿಡ್ನಿ, ಹೃದಯ ಮತ್ತು ಲಿವರ್ ದಾನ ಮಾಡಿ 6 ಜನರ ಪಾಲಿಗೆ ಬೆಳಕಾಗಿದ್ದಾರೆ. ಅವಶ್ಯಕತೆ ಇದ್ದಲ್ಲಿ ಝೀರೋ ಟ್ರಾಫಿಕ್‌ನಲ್ಲಿ ಉಮೇಶ್ ದಂಡಗಿ ಅಂಗಾಂಗಗಳ ರವಾನಿಸಲಾಯಿತು. ಇನ್ನೂ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲೇ ಇರುವ ರೋಗಿಗೆ ಹೃದಯ ದಾನ ಹಾಗೂ ಇಬ್ಬರು ಅಂಧರಿಗೆ ಕಣ್ಣುಗಳನ್ನು ನೀಡಲಾಗಿದೆ.

ವಿಮಾನದ ಮೂಲಕ ಬೆಂಗಳೂರಿಗೆ ಲೀವರ್ ರವಾನಿಸಲಾಯಿತು. ಕೆಎಲ್‌ಇ ಆಸ್ಪತ್ರೆಯಿಂದ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಝೀರೋ ಟ್ರಾಫಿಕ್‌ನಲ್ಲಿ ಲೀವರ್ ರವಾನಿಸಲಾಯಿತು. ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಒಂದು ಕಿಡ್ನಿ, ಹುಬ್ಬಳ್ಳಿ ತತ್ವಾದರ್ಶ ಆಸ್ಪತ್ರೆಗೆ ಒಂದು ಕಿಡ್ನಿಯನ್ನ ಎರಡು ಪ್ರತ್ಯೇಕ ಆ್ಯಂಬುಲೆನ್ಸ್‌ ಮೂಲಕ ರವಾನಿಸಲಾಯಿತು. ಉಮೇಶ್ ಅವರ ಈ ಮಹಾತ್ಕಾರ್ಯಕ್ಕೆ ಎಲ್ಲ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಇವರಿಂದ ಅಂಗಾಂಗ ದಾನ ಪಡೆದ ರೋಗಿಯ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ.

ವರದಿ: ಸಹದೇವ ಮಾನೆ, ಟಿವಿ9 ಬೆಳಗಾವಿ

ಇದನ್ನೂ ಓದಿ: ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ

5 ವರ್ಷಗಳ ಇ-ಟೂರಿಸ್ಟ್ ವೀಸಾಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಮರುಸ್ಥಾಪಿಸಿದ ಕೇಂದ್ರ ಸರ್ಕಾರ

Published On - 5:00 pm, Wed, 16 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?