AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಸೀಡ್ ಪತ್ರ: ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ, ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ

ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಇಂದು ನಡೆದಿದೆ. ಆದರೆ, ಸರ್ಕಾರಕ್ಕೆ ತಿರುಚಿದ ವರದಿ ಕಳುಹಿಸಿದ ಪಾಲಿಕೆ ಆಯುಕ್ತ, ಕಂದಾಯ ಉಪ ಆಯುಕ್ತೆ ಮತ್ತು ಪರಿಷತ್ ಕಾರ್ಯದರ್ಶಿ ವಿರುದ್ಧ ಆಡಳಿತ ರೂಢ ಬಿಜೆಪಿ ಸದಸ್ಯರು ಮುಗಿಬಿದ್ದಿದ್ದು, ಅತ್ತ ಬಿಜೆಪಿ ಮೇಯರ್ ವಿರುದ್ಧ ವಿಪಕ್ಷ ಕಾಂಗ್ರೆಸ್ ಸದಸ್ಯರು ಮುಗಿಬಿದ್ದಿದ್ದಾರೆ.

ಸೂಪರ್ ಸೀಡ್ ಪತ್ರ: ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ, ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ
ಬೆಳಗಾವಿ ಮಹಾನಗರ ಪಾಲಿಕೆImage Credit source: belagaviinfra
Sahadev Mane
| Edited By: |

Updated on: Oct 21, 2023 | 4:31 PM

Share

ಬೆಳಗಾವಿ, ಅ.21: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ (Belagavi City Corporation) ಸರ್ಕಾರದ ಸೂಪರ್ ಸೀಡ್ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲವೇ ಸೃಷ್ಟಿಯಾಗಿದೆ. ಇತ್ತ, ಸರ್ಕಾರಕ್ಕೆ ತಿರುಚಿದ ವರದಿ ಕಳುಹಿಸಿದ ಪಾಲಿಕೆ ಆಯುಕ್ತ, ಕಂದಾಯ ಉಪ ಆಯುಕ್ತೆ ಮತ್ತು ಪರಿಷತ್ ಕಾರ್ಯದರ್ಶಿ ವಿರುದ್ಧ ಆಡಳಿತ ರೂಢ ಬಿಜೆಪಿ ಸದಸ್ಯರು ಮುಗಿಬಿದ್ದರೆ, ಅತ್ತ, ಬಿಜೆಪಿ ಮೇಯರ್ ವಿರುದ್ಧ ವಿಪಕ್ಷ ಕಾಂಗ್ರೆಸ್ ಸದಸ್ಯರು ಮುಗಿಬಿದ್ದಿದ್ದಾರೆ.

ಕಳೆದ ಸಾಮಾನ್ಯ ಸಭೆಯಲ್ಲಿ ಆಸ್ತಿ ಕರ ಹೆಚ್ಚಳ ಮಾಡಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಪಾಲಿಕೆ ಆಯುಕ್ತರು ಆಸ್ತಿ ಕರ 2023/24 ನೇ ಸಾಲಿಗೆ ಹೆಚ್ಚಳ ಮಾಡಲಾಗಿದೆ ಅಂತ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆಗೆ ಸೂಪರ್ ಸೀಡ್ ತೂಗುಗತ್ತಿ: ಪಾಲಿಕೆ ವಿಸರ್ಜನೆಗೆ ನಡೆದಿದೆಯಾ ಹುನ್ನಾರ?

ಇದೇ ಕಾರಣಕ್ಕೆ ಆಡಳಿತರೂಢ ಬಿಜೆಪಿ ಸದಸ್ಯರು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧ ಸಾಮಾನ್ಯ ಸಭೆಯಲ್ಲಿ ಮುಗಿಬಿದ್ದರು. ಅತ್ತ ವರದಿ ಸಲ್ಲಿಕೆಯಲ್ಲಿ ತಮ್ಮದೂ ಪಾಲಿದೆ ಎಂದು ಆರೋಪಿಸಿ ಬಿಜೆಪಿ ಮೇಯರ್ ಶೋಭಾ ಸೋಮನಾಚೆ ವಿರುದ್ಧ ವಿಪಕ್ಷ ಕಾಂಗ್ರೆಸ್ ಸದಸ್ಯರು ಮುಗಿಬಿದ್ದರು.

ಸರ್ಕಾರಕ್ಕೆ ತಿರುಚಿದ ವರದಿ ಕಳುಹಿಸಿದ ಪಾಲಿಕೆ ಆಯುಕ್ತ, ಕಂದಾಯ ಉಪ ಆಯುಕ್ತೆ ರೇಷ್ಮಾ ತಾಳಿಕೋಟ ಮತ್ತು ಪರಿಷತ್ ಕಾರ್ಯದರ್ಶಿ ವಿರುದ್ಧ ಇಲಾಖೆ ತನಿಖೆಗೆ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ಅಖಾಡಕ್ಕೆ ಇಳಿದ ಸತೀಶ್ ಜಾರಕಿಹೊಳಿ

ಪಾಲಿಕೆ ಅಧಿಕಾರಿಗಳ ಬೆನ್ನಿಗೆ ನಿಲ್ಲಲು ಹಾಗೂ ಆಡಳಿತ ರೂಢ ಬಿಜೆಪಿಗೆ ಬಿಸಿ ಮುಟ್ಟಿಸಲು ಸಚಿವ ಸತೀಶ್ ಜಾರಕಿಹೊಳಿ ಅಖಾಡಕ್ಕೆ ಇಳಿದ್ದಿದ್ದಾರೆ. ವಿಪಕ್ಷ ಸದಸ್ಯರ ಜೊತೆಗೆ ಮೇಯರ್, ಬಿಜೆಪಿ ಪಾಲಿಕೆ ಸದಸ್ಯರು ಆಗಮಿಸುವ ಮುನ್ನವೇ ಎಂಟ್ರಿಕೊಟ್ಟ ಸತೀಶ್, ಪಾಲಿಕೆ ಅಧಿಕಾರಿಗಳು ‌ಮತ್ತು ಕಾಂಗ್ರೆಸ್ ಶಾಸಕ, ಸದಸ್ಯರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ