AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಐವರಿಗೆ ಪ್ರತ್ಯೇಕ ವ್ಯವಸ್ಥೆಯ ಗೊಂದಲ: ಪೋಷಕರ ಆಕ್ರೋಶ

ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ದೂರಿದರು.

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಐವರಿಗೆ ಪ್ರತ್ಯೇಕ ವ್ಯವಸ್ಥೆಯ ಗೊಂದಲ: ಪೋಷಕರ ಆಕ್ರೋಶ
ಬೆಳಗಾವಿಯಲ್ಲಿ ಪೋಷಕರ ಪ್ರತಿಭಟನೆ
TV9 Web
| Edited By: |

Updated on:Jan 09, 2022 | 6:13 PM

Share

ಬೆಳಗಾವಿ: ಸೈನಿಕ ಶಾಲೆ ಪ್ರವೇಶಕ್ಕೆ ಭಾನುವಾರ (ಜ.9) ನಡೆದ ಪರೀಕ್ಷೆಯಲ್ಲಿ ಗೋಲ್​ಮಾಲ್ ನಡೆದಿದೆ ಎಂದು ಹಲವು ಪೋಷಕರು ದೂರಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ಪರೀಕ್ಷಾ ಕೇಂದ್ರ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತಿದ್ದಾಗಲೇ ಕೆಲ ಪೋಷಕರು ಪ್ರತಿಭಟನೆ ನಡೆಸಿ, ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಡಾ ಆಡಳಿತಾಧಿಕಾರಿ ಶಶಿಧರ್ ಕುರೇರ್ ಅವರ ಪುತ್ರಿ ಸೇರಿ ಐವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ದೂರಿ, ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು. ಈ ಆರೋಪಗಳನ್ನು ಕೆಎಎಸ್ ಅಧಿಕಾರಿ ಶಶಿಧರ್ ಕುರೇರ್ ತಳ್ಳಿಹಾಕಿದರು.

ಶಾಲೆಯ ಗೇಟ್ ಎದುರು ಹಲವು ಪಾಲಕರು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕೆಎಎಸ್ ಅಧಿಕಾರಿ ಶಶಿಧರ್ ಕುರೇರ್, ಮಗಳಿಗೆ ಕೊವಿಡ್ ಗುಣಲಕ್ಷಣವಿತ್ತು ಹೀಗಾಗಿ ಒಂದು ಗಂಟೆ ಮುಂಚೆ ಬಂದು, ಕೊವಿಡ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿರುವ ಬಗ್ಗೆ ವಿಚಾರಿಸಿದ್ದೆ. ಅದನ್ನು ಪಾಲಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಅವಕಾಶ: ಮೋದಿ ಘೋಷಣೆ ಕಳೆದ ಆಗಸ್ಟ್ 15ರಂದು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನಡೆಸಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಇನ್ನು ಮುಂದೆ ದೇಶದ ಎಲ್ಲ ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳ ಪ್ರವೇಶಕ್ಕೆ ಅವಕಾಶ ಇದೆ ಎಂದಿದ್ದರು. ಸದ್ಯ ದೇಶದ ಕೆಲವೇ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಪ್ರವೇಶಕ್ಕೆ ಅವಕಾಶ ಇದೆ. ಇನ್ನುಳಿದಂತೆ ಗಂಡುಮಕ್ಕಳಿಗೆ ಮಾತ್ರ ಅಲ್ಲಿ ಅವಕಾಶ ಇರುತ್ತದೆ. ಮುಂದಿನ ದಿನಗಳಲ್ಲಿ ಯಾವುದೇ ಸೈನಿಕ ಶಾಲೆಗೆ ಹೆಣ್ಣುಮಕ್ಕಳೂ ಪ್ರವೇಶ ಪಡೆಯಲು ಅವಕಾಶ ಸಿಕ್ಕಿದೆ. ‘ನನಗೆ ಅನೇಕ ಹೆಣ್ಣುಮಕ್ಕಳು ಪತ್ರ ಬರೆದು, ಸೈನಿಕ ಶಾಲೆಗಳಲ್ಲಿ ನಮಗೂ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದರು. ಅದರಂತೆ ನಮ್ಮ ಸರ್ಕಾರ ಅನುಮತಿ ನೀಡಿದೆ’ ಎಂದು ಮೋದಿ ಹೇಳಿದ್ದರು.

ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ; ಖಾಲಿ ಇರುವ ಹುದ್ದೆಗಳು 334 ಭಾರತೀಯ ವಾಯು ಸೇನೆ (IAF) ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆ (AFCAT)-2ಗೆ ಅರ್ಜಿ ಆಹ್ವಾನಿಸಿದೆ. ಹಾರಾಟ ವಿಭಾಗ ಮತ್ತು ಭೂ ವಿಭಾಗ ಎರಡೂ ಕಡೆಗಳಲ್ಲಿ ಖಾಲಿ ಇರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಈ ಅಧಿಸೂಚನೆ ಹೊರಡಿಸಿದೆ. ಆನ್​ಲೈನ್​ನಲ್ಲಿ ನೋಂದಣಿ ಪ್ರಕ್ರಿಯೆ ಜೂ.1ರಿಂದ ಶುರುವಾಗಲಿದ್ದು, ಜೂನ್ 30ರವರೆಗೆ ಅವಕಾಶ ಇರುತ್ತದೆ. ಆಸಕ್ತಿ ಇರುವ ಅರ್ಹರು afcat.cdac.in. ಗೆ ಭೇಟಿ ನೀಡಬೇಕು. ಯಾವ ವಿಭಾಗದಲ್ಲಿ ಆಸಕ್ತಿ ಇದೆಯೋ ಅದನ್ನು ನಮೂದಿಸಿ ಅರ್ಜಿ ಸಲ್ಲಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಸೈನಿಕ ಶಾಲೆ ಪ್ರವೇಶ ಪರೀಕ್ಷೆ ವೇಳೆ ಅಧಿಕಾರಿಗಳ ಎಡವಟ್ಟು: ಅಭ್ಯರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆ, OMR ಶೀಟ್ ಅದಲು ಬದಲು ಇದನ್ನೂ ಓದಿ: ಹೊಸತಾಗಿ 100 ಸೈನಿಕ ಶಾಲೆ, 750 ಏಕಲವ್ಯ ಮಾದರಿ ವಸತಿ ಶಾಲೆ ಅಭಿವೃದ್ಧಿಗೆ ಯೋಜನೆ

Published On - 6:12 pm, Sun, 9 January 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ