AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ.. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ’

ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇದೊಂದು ಅವಕಾಶ ನನಗೆ ಸಿಕ್ಕಿದೆ, ನನಗೆ ಖುಷಿ ಇದೆ. ಯಮಕನಮರಡಿ ಕ್ಷೇತ್ರದ ಜನ ಈಗ ಬೆಂಬಲ ಕೊಟ್ಟಿದ್ದಾರೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದರು.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ.. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ’
ಸತೀಶ್ ಜಾರಕಿಹೊಳಿ‌ (ಸಂಗ್ರಹ ಚಿತ್ರ)
KUSHAL V
|

Updated on:Mar 26, 2021 | 7:10 PM

Share

ಏ.17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಚುನಾವಣೆ ಸ್ಪರ್ಧೆಗೆ ಆಸಕ್ತಿ ಇಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಮಾನಸಿಕವಾಗಿ ನಾನು ಉಪಚುನಾವಣೆಗೆ ತಯಾರಾಗಿದ್ದೇನೆ. ಅನುಕಂಪ ಎಷ್ಟರ ಮಟ್ಟಿಗೆ ಕೆಲಸ ಮಾಡಲಿದೆ ನೋಡಬೇಕು. ನರೇಂದ್ರ ಮೋದಿ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಇದನ್ನ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಬಿಜೆಪಿ ಶಾಸಕರಿದ್ದಾರೆ. ಈಗಿನ ವಿಷಯ ಬೇರೆ ಇದೆ, ಆಗಿನ ವಿಚಾರ ಬೇರೆ ಇದೆ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ’ ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇದೊಂದು ಅವಕಾಶ ನನಗೆ ಸಿಕ್ಕಿದೆ, ನನಗೆ ಖುಷಿ ಇದೆ. ಯಮಕನಮರಡಿ ಕ್ಷೇತ್ರದ ಜನ ಈಗ ಬೆಂಬಲ ಕೊಟ್ಟಿದ್ದಾರೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದರು. ಕಾಂಗ್ರೆಸ್, ಬಿಜೆಪಿ ನಡುವೆ ನೇರಾ ಹಣಾಹಣಿ ಏರ್ಪಡಲಿದೆ. ಸಿಡಿ ಪ್ರಕರಣ ಪ್ರಸ್ತಾಪದಿಂದ ಲಾಭ ಆಗಲಿದೆ ಎಂದು ಅನಿಸಲ್ಲ. ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಮುಂದಿಟ್ಟು ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ‌ ವಿರುದ್ಧ ಸಿಡಿ ಲೇಡಿ ದೂರು ನೀಡುರುವುದು ಬೆಳಗಾವಿ ಲೋಕಸಭಾ ಬೈಎಲೆಕ್ಷನ್ ಮೇಲೆ ಪ್ರಭಾವ ಬೀರಲ್ಲ. ನಮ್ಮ ಪಕ್ಷದ ಮೇಲೆ ಪ್ರಭಾವ ಬೀರುವ ಸಂಬಂಧ ಬರಲ್ಲ ಎಂದು ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ. ಪ್ರಚಾರ ವೇಳೆ ಸಿಡಿ ವಿಚಾರ ಪ್ರಸ್ತಾಪ ಪ್ರಯೋಜನ ಆಗಲ್ಲ. ಸದನದಲ್ಲಿ ಸರ್ಕಾರಕ್ಕೆ ಏನು ಹೇಳಬೇಕಿತ್ತೋ ಪಕ್ಷ ಹೇಳಿದೆ. ಈಗ ಹೇಳುವುದರಿಂದ ನಮಗೆ ಲಾಭ ಆಗುತ್ತೆ ಅನಿಸಲ್ಲ. ನೋಡೋಣ ವರಿಷ್ಠರ ಜೊತೆ ನಾನು ಚರ್ಚೆ ಮಾಡುತ್ತೇನೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.

ಉಪಚುನಾವಣೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಉಪಚುನಾವಣೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆ, ಮನೆಮನೆ ಪ್ರಚಾರಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದೆ. ಪ್ರಚಾರದ ವೇಳೆ ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು. ವ್ಯಕ್ತಿಯಿಂದ ವ್ಯಕ್ತಿಗೆ 2 ಮೀಟರ್​​​ ಅಂತರ ಪಾಲಿಸಬೇಕು. ನಾಮಪತ್ರ ಸಲ್ಲಿಕೆ ವೇಳೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ಚುನಾವಣೆಯ ಸಂದರ್ಭದಲ್ಲಿ ಪ್ರತಿಯೊಂದು ಹಾಲ್, ಕೊಠಡಿಗಳಲ್ಲಿ 6 ಅಡಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಸ್ಕ್ರೀನಿಂಗ್, ಸ್ಯಾನಿಟೇಷನ್‌ ಕಡ್ಡಾಯವಾಗಿ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಶಹಪುರ್ ಟೋಲ್​​ಗೇಟ್​​ನಲ್ಲಿ AEE ಮೇಲೆ ಹಲ್ಲೆ ಪ್ರಕರಣ: 14 ಜನರ ಬಂಧನ

Published On - 7:07 pm, Fri, 26 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ