AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಯಾವೊಬ್ಬ ಕೈ ಶಾಸಕನೂ ಸ್ವಾಗತ ಕೋರಲು ಬಂದಿರಲಿಲ್ಲ. ಹೀಗಾಗಿ ಶಿವಕುಮಾರ್ ಅವರು ಏಕಾಂಗಿಯಾಗಿ ಪ್ರವಾಸ ಮಾಡಿ ನಿರ್ಗಮಿಸಿದ ನಂತರ ಎಲ್ಲಾ ಶಾಸಕರು ಪ್ರತ್ಯಕ್ಷಗೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ
ಸಹದೇವ್​ ಮಾನೆ
| Edited By: Rakesh Nayak Manchi|

Updated on:Oct 20, 2023 | 2:43 PM

Share

ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ಅಸಮಾಧಾನದ ನಡುವೆ ಬೆಳಗಾವಿಯಲ್ಲಿ ಎರಡು ದಿನ ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸದಲ್ಲಿದ್ದರೂ ಸ್ವಪಕ್ಷದ ಯಾವೊಬ್ಬ ಶಾಸಕರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಜಿಲ್ಲೆಯಲ್ಲಿ ಕಾಣಿಸಿಲ್ಲ. 11 ಶಾಸಕರಲ್ಲಿ ಕೇವಲ ಓರ್ವ ಶಾಸಕರು ಮಾತ್ರ ಡಿಸಿಎಂ ಭೇಟಿಗೆ ಬಂದಿದ್ದರು.

ಅದಾಗ್ಯೂ, ಎರಡು ದಿನಗಳ ಕಾಲ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ನಡೆಸಿದ ಡಿಕೆ ಶಿವಕುಮಾರ್ ಅವರು ನಿನ್ನೆ ಬೆಳಗಾವಿಯಿಂದ ನಿರ್ಗಮಿಸಿದ್ದಾರೆ. ಇಂದು ಶಾಸಕರೆಲ್ಲರೂ ಪ್ರತ್ಯಕ್ಷಗೊಂಡಿದ್ದಾರೆ. ಶಾಸಕರಾದ ಆಸೀಫ್ ಸೇಠ್, ರಾಜು ಕಾಗೆ, ಬಾಬಾಸಾಹೇಬ್ ಪಾಟೀಲ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಮೈಸೂರು ಪ್ರವಾಸಕ್ಕೆ ಹೋಗಿದ್ದರಿಂದ ಡಿಸಿಎಂ ಭೇಟಿಯಾಗಿಲ್ಲ ಎಂದು ಹೇಳುವ ಮೂಲಕ ಮೂವರು ಶಾಸಕರು ಸಬೂಬು ನೀಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಬೆಳಗಾವಿ ಪ್ರವಾಸ: ಸತೀಶ್ ಜಾರಕಿಹೊಳಿ ಸೈಲೆಂಟ್ ಸ್ಕೆಚ್‌‌!

ನಾನಾ ಕಾರ್ಯಕ್ರಮಗಳ ನಿಮಿತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು (ಅಕ್ಟೋಬರ್ 18) ಬೆಳಗಾವಿಗೆ ಬಂದಿದ್ದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯನ್ನೂ ನಡೆಸಿದ್ದರು. ಆದರೆ ತವರು ಜಿಲ್ಲೆಗೆ ಡಿಕೆ ಶಿವಕುಮಾರ್ ಬಂದರೂ ಜಾರಕಿಹೊಳಿ ಅಂತರ ಕಾಪಾಡಿಕೊಂಡಿದ್ದರು.

ಆ ಮೂಲಕ ಡಿಸಿಎಂಗೆ ತಮ್ಮ ಪ್ರಭಾವದ ಟ್ರೈಲರ್ ತೋರಿಸಿ, ಅಭಿಬಿ ಪಿಕ್ಚರ್ ಹೈ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ. ತಮ್ಮ ಬೆಂಬಲಗರನ್ನು ಸಹ ಡಿಕೆ ಶಿವಕುಮಾರ್ ಕಾರ್ಯಕ್ರಮಗಳಿಂದ ದೂರ ಇಡುವ ಮೂಲಕ ಸತೀಶ್ ಜಾರಕಿಹೊಳಿ, ಇಡೀ ಬೆಳಗಾವಿ ಜಿಲ್ಲೆ ತಮ್ಮ ಹಿಡಿತದಲ್ಲಿದೆ ಎನ್ನುವುದನ್ನು ಶಿವಕುಮಾರ್​ಗೆ ಮನವರಿಕೆ ಮಾಡಿಕೊಟ್ಟಂತಿದೆ. ಒಟ್ಟಿನಲ್ಲಿ ಮೈತ್ರಿ ಸರ್ಕಾರವಿದ್ದಾಗ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ಗೆ ತಲೆನೋವು ಆಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಅಸಮಾಧಾನ ಕಾಂಗ್ರೆಸ್​ ಗೆ ದೊಡ್ಡ ಟೆನ್ಷನ್ ತಂದೊಡ್ಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 20 October 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್