AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ - ಯಡೂರ ಮಾರ್ಗಮಧ್ಯ ಸಂಚರಿಸುವ ಸರ್ಕಾರಿ ಬಸ್​​ ಮೇಲೆ ಅಂಟಿಸಿರುವ ವೀರ ಸಾವರ್ಕರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಇದನ್ನು ಎಸ್​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು KSRTC ಟ್ವೀಟ್ ಮಾಡಿದೆ.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು
ಸರ್ಕಾರಿ ಬಸ್​​ನಲ್ಲಿ ವೀರ ಸಾವರ್ಕರ್ ಫೋಟೋ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Aug 17, 2023 | 9:29 PM

Share

ಚಿಕ್ಕೋಡಿ, ಆಗಸ್ಟ್ 17: ಬೆಳಗಾವಿ (Belagavi) ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಚಿತ್ರ ಅಂಟಿಸಿರುವುದ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿಕ್ಕೋಡಿ ಮತ್ತು ಯಡೂರ ಮಾರ್ಗದ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ ನಿಷೇಧಿತ ಪಿಎಫ್​​ಐ ಸಂಘಟನೆಯ ರಾಜಕೀಯ ಪಕ್ಷ ಎಸ್​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

KA 23 F 904 ಸಂಖ್ಯೆಯ ಚಿಕ್ಕೋಡಿ – ಯಡೂರ ಮಾರ್ಗಮಧ್ಯ ಸಂಚರಿಸುವ ಬಸ್ ಮೇಲೆ ಸಾವರ್ಕರ್ ಚಿತ್ರ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಡಿಪೋಗೆ ಸೇರಿದ NWKRTC ಬಸ್ ಇದಾಗಿದೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ದನಿಗೂಡಿಸಿದ ಬಿಜೆಪಿ ಸಂಸದ ಜೊಲ್ಲೆ, ಬೆಳಗಾವಿ ವಿಭಜಿಸುತ್ತಾ ಕಾಂಗ್ರೆಸ್ ಸರ್ಕಾರ?

ಫೋಟೋ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಆಗಸ್ಟ್ 15 ರಂದು ಟ್ವೀಟ್ ಮಾಡಿದ ಎಸ್‌ಡಿಪಿಐ ಮುಖಂಡ ಅಫ್ಸರ್ ಕೊಡ್ಲಿಪೇಟೆ, ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ ವೀರ ಸಾವರ್ಕರ್ ಈ ಚಿತ್ರ ಚಿಕ್ಕೋಡಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ? ಎಂದು ಬರೆದುಕೊಂಡಿದ್ದಾರೆ.

ಅಫ್ಸರ್ ಕೊಡ್ಲಿಪೇಟೆಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಕೆಎಸ್‌ಆರ್‌ಟಿಸಿ, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು ಹೇಳಿದೆ. ಅಫ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ ಬಗ್ಗೆ ಮಾಹಿತಿ ಇಲ್ಲ ಎಂದು NWKRTC ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಹೇಳುತ್ತಿದ್ದಾರೆ. ಸದ್ಯ ಆ ಬಸ್​ನಲ್ಲಿ ಫೋಟೋ ತೆರವು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ