AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ - ಯಡೂರ ಮಾರ್ಗಮಧ್ಯ ಸಂಚರಿಸುವ ಸರ್ಕಾರಿ ಬಸ್​​ ಮೇಲೆ ಅಂಟಿಸಿರುವ ವೀರ ಸಾವರ್ಕರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಇದನ್ನು ಎಸ್​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು KSRTC ಟ್ವೀಟ್ ಮಾಡಿದೆ.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು
ಸರ್ಕಾರಿ ಬಸ್​​ನಲ್ಲಿ ವೀರ ಸಾವರ್ಕರ್ ಫೋಟೋ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: Rakesh Nayak Manchi|

Updated on: Aug 17, 2023 | 9:29 PM

Share

ಚಿಕ್ಕೋಡಿ, ಆಗಸ್ಟ್ 17: ಬೆಳಗಾವಿ (Belagavi) ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಚಿತ್ರ ಅಂಟಿಸಿರುವುದ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿಕ್ಕೋಡಿ ಮತ್ತು ಯಡೂರ ಮಾರ್ಗದ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ ನಿಷೇಧಿತ ಪಿಎಫ್​​ಐ ಸಂಘಟನೆಯ ರಾಜಕೀಯ ಪಕ್ಷ ಎಸ್​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

KA 23 F 904 ಸಂಖ್ಯೆಯ ಚಿಕ್ಕೋಡಿ – ಯಡೂರ ಮಾರ್ಗಮಧ್ಯ ಸಂಚರಿಸುವ ಬಸ್ ಮೇಲೆ ಸಾವರ್ಕರ್ ಚಿತ್ರ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಡಿಪೋಗೆ ಸೇರಿದ NWKRTC ಬಸ್ ಇದಾಗಿದೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ದನಿಗೂಡಿಸಿದ ಬಿಜೆಪಿ ಸಂಸದ ಜೊಲ್ಲೆ, ಬೆಳಗಾವಿ ವಿಭಜಿಸುತ್ತಾ ಕಾಂಗ್ರೆಸ್ ಸರ್ಕಾರ?

ಫೋಟೋ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಆಗಸ್ಟ್ 15 ರಂದು ಟ್ವೀಟ್ ಮಾಡಿದ ಎಸ್‌ಡಿಪಿಐ ಮುಖಂಡ ಅಫ್ಸರ್ ಕೊಡ್ಲಿಪೇಟೆ, ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ ವೀರ ಸಾವರ್ಕರ್ ಈ ಚಿತ್ರ ಚಿಕ್ಕೋಡಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ? ಎಂದು ಬರೆದುಕೊಂಡಿದ್ದಾರೆ.

ಅಫ್ಸರ್ ಕೊಡ್ಲಿಪೇಟೆಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಕೆಎಸ್‌ಆರ್‌ಟಿಸಿ, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು ಹೇಳಿದೆ. ಅಫ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ ಬಗ್ಗೆ ಮಾಹಿತಿ ಇಲ್ಲ ಎಂದು NWKRTC ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಹೇಳುತ್ತಿದ್ದಾರೆ. ಸದ್ಯ ಆ ಬಸ್​ನಲ್ಲಿ ಫೋಟೋ ತೆರವು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ