AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಮಾಳಿ ಬದಲಿಗೆ ಮುಸ್ಲಿಂ, ಕ್ರಿಶ್ಚಿಯನ್ ಇದ್ದಿದ್ದರೇ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು: ಬಿಜೆಪಿ ವಿರುದ್ಧ ಎಸ್​ಡಿಪಿಐ ವಾಗ್ದಾಳಿ

ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿದ್ದ ಕಾನೂನು ಸುವ್ಯವಸ್ಥೆ, ಕಾಂಗ್ರೆಸ್ ಸರ್ಕಾರ ಬಂದ ಬಳಿಕವೂ ಮುಂದುವರೆದಿದೆ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ವಾಗ್ದಾಳಿ ಮಾಡಿದರು.

ನಾರಾಯಣ ಮಾಳಿ ಬದಲಿಗೆ ಮುಸ್ಲಿಂ, ಕ್ರಿಶ್ಚಿಯನ್ ಇದ್ದಿದ್ದರೇ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು: ಬಿಜೆಪಿ ವಿರುದ್ಧ ಎಸ್​ಡಿಪಿಐ ವಾಗ್ದಾಳಿ
ಎಸ್​ಡಿಪಿಐ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 14, 2023 | 2:57 PM

Share

ಬೆಳಗಾವಿ: ಹಿರೇಕೋಡಿ ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿದ್ದ ಕಾನೂನು ಸುವ್ಯವಸ್ಥೆ, ಕಾಂಗ್ರೆಸ್ (Cogress) ಸರ್ಕಾರ ಬಂದ ಬಳಿಕವೂ ಮುಂದುವರೆದಿದೆ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ (BJP) ವಿರುದ್ಧ ಎಸ್‌ಡಿಪಿಐ (SDPI) ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ವಾಗ್ದಾಳಿ ಮಾಡಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಘಟನೆ ನಡೆದ ಆರು ಗಂಟೆಯಲ್ಲಿ ಆರೋಪಿ ಅರೆಸ್ಟ್ ಮಾಡಿದ ಪೊಲೀಸರಿಗೆ ಅಭಿನಂದಿಸುತ್ತೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ಯಾವುದೇ ಕಾರಣಕ್ಕೂ ಕೊಲೆ ಆದರೂ, ಅಲ್ಲಿ ಬೆಂಕಿ ಹಚ್ಚಲು ನಳೀನ್ ಕುಮಾರ್ ಕಟೀಲು ಟೀಮ್ ಭೇಟಿ ನೀಡುತ್ತೆ. ನಾರಾಯಣ ಮಾಳಿ ಬದಲಿಗೆ ಮುಸ್ಲಿಂ, ಕ್ರಿಶ್ಚಿಯನ್ ಇದ್ದಿದ್ದರೇ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ನಿರಾಶ್ರಿತ ಸಿ‌ಟಿ ರವಿ ಮೈಸೂರಿನಲ್ಲಿ ನಡೆದ ಕೊಲೆ ಜಾಗಕ್ಕೆ ಭೇಟಿ ನೀಡುತ್ತಾರೆ. ಬಿಜೆಪಿಯವರು ಕೊಲೆಯಲ್ಲಿ ಭಾಗಿಯಾಗಿದ್ದನ್ನು ಕೇಳಿ ಕಾಲ್ಕಿಳುತ್ತಾರೆ. ಕೋಮು ವಿಷ ಬೀಜ ಬಿತ್ತುವ ಕೋಮು ಕ್ರಿಮಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ಈ ನಿಟ್ಟಿನಲ್ಲಿ ರಾಜ್ಯದ ಗೃಹ ಇಲಾಖೆ ಹೊಸ ಕಾನೂನು ಜಾರಿಗೆ ತರಬೇಕು. ಈಗಾಗಲೇ ಪತ್ರವನ್ನ ಸರ್ಕಾರಕ್ಕೆ ಬರೆದು ಮನವಿ ಮಾಡಿಕೊಂಡಿದ್ದೇವೆ ಎಂದರು.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ; ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ವಶಕ್ಕೊಪ್ಪಿಸಿದ ನ್ಯಾಯಾಲಯ

ವಿರೋಧ ಪಕ್ಷದ ನಾಯಕರಿಲ್ಲದೇ ಅಧಿವೇಶನ ನಡೆಯುತ್ತಿರುವುದು ದುರಂತ. ಬಿಜೆಪಿ ನಾಯಕರಿಗೆ ತಮ್ಮ ನಾಯಕರನ್ನ ಆಯ್ಕೆ ಮಾಡುವ ಕೆಪ್ಯಾಸಿಟಿ ಇಲ್ಲ. ಕಾಂಗ್ರೆಸ್​ನವರು ಮುಸ್ಲಿಂ ಮೀಸಲಾತಿ ಮರುಸ್ಥಾಪಿಸುತ್ತೇವೆ ಅಂತ ಹೇಳಿದರೂ ಆಗಿಲ್ಲ. ಭಜರಂಗದಳ ಬ್ಯಾನ್ ಮಾಡುತ್ತೇನಿ ಅಂದಿದ್ದರೂ ಅದು ಆಗಿಲ್ಲ ಎಂದು ವಾಗ್ದಾಳಿ ಮಾಡಿದರು.

ಯಾವುದೇ ಕೊಲೆಗಳನ್ನ ಒಂದು ಕೋಮು, ಜಾತಿಗೆ ಸಮೀಕರಿಸುವುದು ದೂರವಿಡಿ. ಕೊಲೆಗಡುಕರಿಗೆ ಯಾವುದೇ ಜಾತಿ ಧರ್ಮ ಇರುವುದಿಲ್ಲ. ಈ ಕೊಲೆಯನ್ನ ಎಸ್‌ಡಿಪಿಐ ಸಂಘಟನೆ ಖಂಡನೆ ಮಾಡುತ್ತೇವೆ. ಹಸನ್ ದಲಾಯತ್ ಕೊಲೆ ಮಾಡಿದ್ದರೇ ಅವನಿಗೂ ಕಠಿಣ ಶಿಕ್ಷೆ ಕೊಡಿ. ಜೈನ ಮುನಿ ಹತ್ಯೆಗೆ ಐಸಿಸಿ ಲಿಂಕ್ ಇದೆ ಅನ್ನೋದು ಊಹಾಪೋಹ‌ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?